ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
Cross references
ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ.
ಇದಲ್ಲದೆ ಅವನು ಉನ್ನತ ಸ್ಥಳಗಳ ಒಂದು ಮನೆಯನ್ನು ಕಟ್ಟಿಸಿ ಲೇವಿಯ ಮಕ್ಕಳಲ್ಲದ ಜನರಲ್ಲಿ ಕನಿಷ್ಠ ಜನರೊಳಗಿಂದ ಯಾಜಕರನ್ನು ನೇಮಿಸಿ ದನು.
ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು.
ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರಿನ ಅರಸನಾದ ಸನ್ಹೇರೀಬನು ಯೆಹೂದದ ಕೋಟೆಯುಳ್ಳ ಸಕಲ ಪಟ್ಟಣಗಳ ಮೇಲೆ ಬಂದು ಅವುಗಳನ್ನು ವಶಪಡಿಸಿಕೊಂಡನು.
ಅವನು ಅರಣ್ಯದಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿ ದನು; ತಗ್ಗಿನ ದೇಶದಲ್ಲಿಯೂ ಬೈಲು ದೇಶದಲ್ಲಿಯೂ ಅವನಿಗೆ ಬಹು ಕುರಿದನಗಳಿದ್ದವು. ಹಾಗೆಯೇ ಪರ್ವತ ಗಳಲ್ಲಿಯೂ ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿ ಗರೂ ದ್ರಾಕ್ಷೇ ವ್ಯವಸಾಯದವರೂ ಇದ್ದರು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.
ಇದಲ್ಲದೆ ಯೆಹೂದ ಪರ್ವತಗಳಲ್ಲಿ ಪಟ್ಟಣಗಳನ್ನೂ ಅರಣ್ಯದಲ್ಲಿ ಕೋಟೆ ಗಳನ್ನೂ ಗಡೀಸ್ಥಾನಗಳನ್ನೂ ಕಟ್ಟಿಸಿದನು.
ತಮ್ಮ ರಕ್ಷಕನಾಗಿ ಐಗುಪ್ತದೇಶದಲ್ಲಿ ದೊಡ್ಡ ಕೆಲಸಗಳನ್ನೂ
ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು ನಿನ್ನ ಬಲದ ಬಂಡೆ ಯನ್ನು ನೆನಸದೆ ಇದ್ದದರಿಂದ ನೀನು ರಮ್ಯವಾದ ಗಿಡಗಳನ್ನು ಸಸಿಯನ್ನು ನೆಡುವಿ, ಅಪರೂಪವಾದ ಸಸಿಗಳನ್ನು ಹಾಕುವಿ.
ಅವನು ಯೆಹೂ ದದ ಮುಸುಕನ್ನು ತೆಗೆದಿದ್ದಾನೆ. ಆ ದಿವಸದಲ್ಲಿ ಅಡವಿ ಮನೆಯ ಯುದ್ಧಸಾಮಗ್ರಿಯ ಕಡೆಗೆ ದೃಷ್ಟಿ ಇಡುತ್ತಿ.
ಆದರೆ ನನ್ನ ಕೈಕೆಲಸವಾದ ಅವನ ಮಕ್ಕಳನ್ನು ತನ್ನ ಮಧ್ಯದಲ್ಲಿ ನೋಡುವಾಗ ನನ್ನ ನಾಮವನ್ನು ಪರಿಶುದ್ಧವೆಂದೆಣಿಸಿ ಯಾಕೋಬನ ಪರಿ ಶುದ್ಧನನ್ನು ಪ್ರತಿಷ್ಠಿಸುವರು; ಇಸ್ರಾಯೇಲಿನ ದೇವ ರಿಗೆ ಭಯಪಡುವರು.ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗುಣುಗುಟ್ಟುವವರು ಬೋಧನೆ ಕಲಿಯುವರು.
ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು.
ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.
ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.
ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಲ್ಪಟ್ಟಿತು, ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿ ಕೆಗಳೇ; ಯಾಕಂದರೆ ತಮ್ಮ ಮಾರ್ಗವನ್ನು ಡೊಂಕು ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತುಬಿಟ್ಟಿ ದ್ದರು.
ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಮಿಂಡರ ಹಿಂದೆ ಹೋಗಿ ಬಾಳ್ ದೇವತೆಗಳ ದಿವಸಗಳಲ್ಲಿ ಧೂಪ ಸುಟ್ಟಿದ್ದಕ್ಕೆ ನಾನು ಅವಳನ್ನು ದಂಡಿಸುವೆನು ಎಂದು ಕರ್ತನು ಹೇಳುತ್ತಾನೆ.
ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು.
ಆದರೆ ನಾನು ಹಜಾಯೇಲನ ಮನೆಯೊಳಗೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು.
ಆದರೆ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.
ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.
ಆದರೆ ನಾನು ರಬ್ಬದ ಗೋಡೆಯಲ್ಲಿ ಬೆಂಕಿಯನ್ನು ಹತ್ತಿಸುವೆನು; ಅದು ಯುದ್ಧದ ದಿನದಲ್ಲಿ ಆರ್ಭಟದ ಸಂಗಡವೂ ಬಿರುಗಾಳಿಯ ದಿನದಲ್ಲಿ ಸುಳಿಗಾಳಿಯ ಸಂಗಡವೂ ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ.
ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು; ಅದು ಯೆರೂಸಲೇಮಿನ ಅರಮನೆ ಗಳನ್ನು ನುಂಗಿ ಬಿಡುವದು.
ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.