ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.
Cross references
ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು.
ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.
ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು.
ಆಗ ಯಾಬೇಷನ ಮಗನಾದ ಶಲ್ಲೂಮನು ಅವನ ಮೇಲೆ ಒಳಸಂಚು ಮಾಡಿ ಜನರ ಮುಂದೆ ಅವನನ್ನು ಹೊಡೆದು ಕೊಂದು ಹಾಕಿ ಅವನಿಗೆ ಬದಲಾಗಿ ಅರಸನಾದನು.
ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ.
ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ; ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅವೆಲ್ಲವೂ ಶಿಲ್ಪಿಗಳ ಕೈಕೆಲಸವೇ, ಬಲಿ ಅರ್ಪಿಸುವ ಮನುಷ್ಯರು ಹಸುಗಳಿಗೆ ಮುದ್ದಿಡಲೆಂದು ಅವರು ಅವರ ವಿಷಯ ವಾಗಿ ಹೇಳಿದರು.
ಓ ಇಸ್ರಾಯೇಲೇ, ನಿನ್ನನ್ನು ನೀನು ಹಾಳುಮಾಡಿಕೊಂಡಿದ್ದೀ, ಆದರೆ ನನ್ನಲ್ಲಿ ನಿನಗೆ ಸಹಾಯ ಉಂಟು.
ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.
ಆದರೆ ಆತನು--ನೀವು ಎಲ್ಲಿ ಯವರೋ ನಾನರಿಯೆ; ಅಕ್ರಮ ಮಾಡುವವರಾದ ನೀವೆಲ್ಲರೂ ನನ್ನಿಂದ ಹೊರಟುಹೋಗಿರಿ ಎಂದು ಹೇಳುವನೆಂದು ನಾನು ನಿಮಗೆ ಹೇಳುತ್ತೇನೆ.
ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ.
ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ?