ಓ ಸಮಾ ರ್ಯವೇ, ನಿನ್ನ ಬಸವನನ್ನು ನಾನು ತಳ್ಳಿಹಾಕಿದ್ದೇನೆ; ನನ್ನ ಕೋಪವು ಅವರ ಮೇಲೆ ಉರಿಯುತ್ತದೆ; ಅವರು ನಿರಪರಾಧಿಗಳಾಗದೆ ಇರುವದು ಎಷ್ಟರ ವರೆಗೆ?
Cross references
ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ
ಅವನು ಇಸ್ರಾಯೇಲನ್ನು ದಾವೀದನ ಮನೆಯಿಂದ ಹರಿದುಬಿಟ್ಟನು; ಅವರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲ್ಯರನ್ನು ಕರ್ತ ನನ್ನು ಹಿಂಬಾಲಿಸುವದರಿಂದ ತಪ್ಪಿಸಿ ಅವರನ್ನು ಮಹಾ ಪಾಪಮಾಡಲು ಪ್ರೇರೇಪಿಸಿದನು.
ಈಗ ದಾವೀದನ ಕುಮಾರರ ಕೈಯಲ್ಲಿರುವ ಕರ್ತನ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿ ಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೋಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.
ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
ಅದು ಇಸ್ರಾಯೇಲ್ಯರಿಂದಲೂ ಆಗಿದೆ; ಕೆಲಸಗಾರನು ಅದನ್ನು ಮಾಡಿದನು, ಆದ್ದರಿಂದ ಅದು ದೇವರಲ್ಲ; ಆದರೆ ಸಮಾರ್ಯದ ಕರುವು ಪುಡಿಪುಡಿಯಾಗಿ ಮುರಿಯಲ್ಪಡುವದು.
ಬೇತಾವೆನಿನ ಕರುಗಳ ನಿಮಿತ್ತ ಸಮಾರ್ಯದ ನಿವಾಸಿಗಳು ಭಯಪಡುವರು; ಅದರ ಮಹಿಮೆಯು ಅವರಿಂದ ಕಳೆದುಹೋದ ಕಾರಣ ಅಂದು ಅದರ ವಿಷಯದಲ್ಲಿ ಸಂತೋಷಪಟ್ಟ ಜನರೂ ಪೂಜಾರಿಗಳೂ ಗೋಳಾಡುವರು.
ಇಸ್ರಾಯೇಲಿನ ಪಾಪವಾದ ಅವೇ ನಿನ ಉನ್ನತವಾದ ಸ್ಥಳಗಳು ಹಾಳಾಗಿಹೋಗುವವು. ಮುಳ್ಳುಗಿಡಗಳೂ ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವವು; ಅವರು ಬೆಟ್ಟಗಳಿಗೆ--ನಮ್ಮನ್ನು ಮುಚ್ಚಿರಿ, ಗುಡ್ಡಗಳೇ ನಮ್ಮ ಮೇಲೆ ಬೀಳಿರಿ ಅನ್ನುವರು.
ಅದರ ಕೆತ್ತಿದ ವಿಗ್ರಹಗಳೆಲ್ಲಾ ತುಂಡು ಗಳಾಗುವಂತೆ ಒಡೆಯಲ್ಪಡುವವು. ಅದಕ್ಕೆ ಆದ ಸಂಪಾದನೆಗಳೆಲ್ಲಾ ಬೆಂಕಿಯಿಂದ ಸುಡಲ್ಪಡುವವು; ಅದರ ವಿಗ್ರಹಗಳನ್ನೆಲ್ಲಾ ಹಾಳುಮಾಡುವೆನು; ಸೂಳೆಯ ಕೂಲಿಯಿಂದ ಅವುಗಳನ್ನು ಕೂಡಿಸಿ ಕೊಂಡಿತು, ಸೂಳೆಯ ಕೂಲಿಗೆ ಅವು ತಿರುಗುವವು.
ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನರ್ಪಿಸಿ ತಮ್ಮ ಸ್ವಂತ ಕೈಗಳಿಂದ ಮಾಡಿದ ಕೆಲಸಗಳಲ್ಲಿ ಉಲ್ಲಾಸಪಟ್ಟರು.