ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ.
Cross references
ಇಗೋ, ಮೂಡಣ ಗಾಳಿಯಿಂದ ಬತ್ತಿ ಹೋಗಿ ಬಡಕಲಾದ ಏಳು ತೆನೆಗಳು ಅವುಗಳ ತರುವಾಯ ಮೊಳೆತವು.
ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ.
ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು
ಆದದ ರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪಿಸಿ ಕೊಂಡು ಅವರನ್ನು ಅರಾಮ್ಯರ ಅರಸನಾದ ಹಜಾ ಯೇಲನ ಕೈಯಲ್ಲಿಯೂ ಹಜಾಯೇಲನ ಮಗನಾದ ಬೆನ್ಹದದನ ಕೈಯಲ್ಲಿಯೂ ಎಲ್ಲಾ ದಿವಸಗಳಲ್ಲಿ ಒಪ್ಪಿಸಿ ಕೊಟ್ಟನು.
ಆದರೆ ಅಶ್ಶೂರದ ಅರಸನಾದ ಪೂಲನು ದೇಶದ ಮೇಲೆ ಬಂದನು. ಆಗ ಮೆನಹೇಮನು ರಾಜ್ಯವನ್ನು ತನ್ನ ಕೈಯಲ್ಲಿ ಧೃಢಪಡಿಸಲು ಅವನ ಕೈ ತನ್ನ ಸಂಗಡ ಇರುವ ಹಾಗೆ ಪೂಲನಿಗೆ ಸಾವಿರ ಬೆಳ್ಳಿ ತಲಾಂತು ಗಳನ್ನು ಕೊಟ್ಟನು.
ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
ನಾನು ಕಂಡ ಹಾಗೆ ದುಷ್ಟತನವನ್ನು ಉಳುವವರೂ ದುಷ್ಟತನವನ್ನು ಬಿತ್ತುವ ವರೂ ಅದನ್ನೇ ಕೊಯ್ಯುತ್ತಾರೆ.
ಕೆಟ್ಟತನವನ್ನು ಬಿತ್ತುವವನು ವ್ಯರ್ಥ ವನ್ನು ಕೊಯ್ಯುವನು; ಅವನ ಕೋಪದ ದಂಡವು ಬಿದ್ದುಹೋಗುವದು.
ಇದೂ ಕೂಡ ವ್ಯಥೆಯಿಂದ ಕೂಡಿದ ಕೆಟ್ಟತನವೇ. ಅದು ಯಾವ ದಂದರೆ ಎಲ್ಲಾ ವಿಷಯಗಳಲ್ಲಿ ತಾನು ಹೇಗೆ ಬಂದನೋ ಹಾಗೆಯೇ ಹೋಗುವನು; ಗಾಳಿಗಾಗಿ ಪ್ರಯಾಸಪಟ್ಟ ವನಿಗೆ ಲಾಭವೇನಿದೆ?
ಸಸಿಯನ್ನು ಬೆಳೆಸಲು ಬೇಲಿ ಹಾಕಿದ ದಿನದಲ್ಲಿ ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆ ಯುವಂತೆ ಮಾಡುವಿ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವೇ.
ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.
ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ದೇಶದ ನಿವಾಸಿಗಳನ್ನೆಲ್ಲಾ ದಾವೀದನ ಸಿಂಹಾಸನದಲ್ಲಿ ಕೂಡ್ರುವ ಅರಸುಗಳನ್ನೂ ಯಾಜಕರನ್ನೂ ಪ್ರವಾದಿ ಗಳನ್ನೂ ಯೆರೂಸಲೇಮಿನ ನಿವಾಸಿಗಳೆಲ್ಲರನ್ನೂ ಅಮಲಿನಿಂದ ತುಂಬಿಸುವೆನು.
ಆದ್ದರಿಂದ ನಾನು ತಿರುಗಿ ಕೊಂಡು ನನ್ನ ಧಾನ್ಯವನ್ನು ಅದರ ಕಾಲದಲ್ಲಿಯೂ ನನ್ನ ದ್ರಾಕ್ಷಾರಸವನ್ನು ಅದರ ಸಮಯದಲ್ಲಿಯೂ ತೆಗೆದಹಾಗೆ ಅವಳ ಬೆತ್ತಲೆತನವನ್ನು ಮುಚ್ಚುವದ ಕ್ಕಿದ್ದ ನನ್ನ ಉಣ್ಣೆಯನ್ನೂ ನನ್ನ ನಾರು ಬಟ್ಟೆಯನ್ನೂ ತೆಗೆದುಕೊಳ್ಳುವೆನು.
ಪರಕೀಯರು ಅವನ ಶಕ್ತಿಯನ್ನು ನುಂಗಿಬಿಟ್ಟಿದ್ದಾರೆ; ಅದು ಅವನಿಗೆ ಗೊತ್ತಿಲ್ಲ; ಹೌದು, ನರೆ ಕೂದಲು ಅಲ್ಲಲ್ಲಿ ಅವನ ಮೇಲೆ ಅದೆ. ಆದಾಗ್ಯೂ ಅವನು ತಿಳಿಯದೇ ಇದ್ದಾನೆ.
ನಿಮಗಾಗಿ ನೀತಿಯಲ್ಲಿ ಬಿತ್ತಿರಿ, ಕರುಣೆಯಲ್ಲಿ ಕೊಯ್ಯಿರಿ; ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ; ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವ ವರೆಗೂ ಕರ್ತನನ್ನು ಹುಡುಕುವ ಸಮಯ ಇದೇ.
ನೀವು ದುಷ್ಟತ್ವವನ್ನು ಬಿತ್ತು ಅನ್ಯಾಯವನ್ನು ಕೊಯ್ದಿರಿ. ಸುಳ್ಳಿನ ಫಲವನ್ನು ತಿಂದಿದ್ದೀರಿ; ನಿನ್ನ ಮಾರ್ಗದಲ್ಲಿಯೂ ನಿನ್ನ ಬಲಿಷ್ಠರಾದ ಹಲವರಲ್ಲಿಯೂ ಭರವಸೆಯಿಟ್ಟಿದ್ದೀ.
ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.
ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.