ನಾನು ಅರಣ್ಯದಲ್ಲಿ ದ್ರಾಕ್ಷೆಯ ಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡ ದಲ್ಲಿ ಮೊದಲನೆಯ ಹಣ್ಣುಗಳ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು; ಆದರೆ ಅವರು ಬಾಳ್ ಪೆಗೋರಿಗೆ ಹತ್ತಿರ ಬಂದು ನಾಚಿಕೆಯಾದದ್ದಕ್ಕೆ ತಮ್ಮನ್ನು ಪ್ರತ್ಯೇ ಕಿಸಿಕೊಂಡರು; ಅವರು ಪ್ರೀತಿಮಾಡಿದ್ದರ ಹಾಗೆ ಅಸಹ್ಯರಾದರು.
Cross references
ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ;
ಅವರು ಎಷ್ಕೋಲ ಹಳ್ಳದ ವರೆಗೂ ಬಂದು ಅಲ್ಲಿ ದ್ರಾಕ್ಷೇಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು ಅದನ್ನು ಅಡ್ಡಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು; ಇದಲ್ಲದೆ ದಾಳಿಂಬರ ಅಂಜೂರ ಹಣ್ಣುಗಳನ್ನು ತಕ್ಕೊಂಡು ಹೋದರು.
ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು ಅದನ್ನು ನೋಡುವಾಗ ಕರ್ತನ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ಹೃದಯವನ್ನೂ ಕಣ್ಣುಗಳನ್ನೂ ಅವು ಗಳಿಗನುಸಾರವಾಗಿ ಜಾರತ್ವಮಾಡುವಂತೆ ಹಿಂಬಾ ಲಿಸದೆ
ಅವರು ಕರ್ತನಿಗೆ ತರುವ ದೇಶದ ಎಲ್ಲವುಗಳ ಪ್ರಥಮ ಫಲಗಳು ನಿನ್ನವುಗಳಾಗಿರುವವು. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನ್ನು ಅದನ್ನು ತಿನ್ನಬಹುದು.
ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು.
ಇಸ್ರಾಯೇಲ್ ಬಾಳ್ಪೆಯೋರಿಗೆ ತಾನೇ ಕೂಡಿಕೊಂಡದ್ದರಿಂದ ಕರ್ತನ ಕೋಪವು ಇಸ್ರಾಯೇಲಿನ ಮೇಲೆ ಉರಿಯಿತು.
ಬಾಳ್ಪೆಯೋರನ ವಿಷಯದಲ್ಲಿ ಕರ್ತನು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು; ಬಾಳ್ಪೆ ಯೋರನನ್ನು ಹಿಂಬಾಲಿಸಿದ ಮನುಷ್ಯರನ್ನೆಲ್ಲಾ ನಿನ್ನ ದೇವರಾದ ಕರ್ತನು ನಿಮ್ಮ ಮಧ್ಯದಲ್ಲಿಂದ ನಾಶ ಮಾಡಿದನಲ್ಲವೇ?
ಆತನು ಅರಣ್ಯದ ಭೂಮಿಯಲ್ಲಿಯೂ ಕಿರುಚುವ ಅಡವಿಯ ಕಾಡಿನಲ್ಲಿಯೂ ಅವನನ್ನು ಕಂಡುಕೊಂಡನು; ಆತನು ಅವನನ್ನು ನಡಿಸಿ, ಉಪದೇಶಿಸಿದನು. ತನ್ನ ಕಣ್ಣುಗುಡ್ಡೆಯಂತೆ ಕಾಪಾಡಿದನು.
ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು.
ಗಿದ್ಯೋ ನನು ಬಾಳನ ಬಲಿಪೀಠವನ್ನು ಕೆಡವಿದ್ದರಿಂದ ಅವನು ಅವನ ಸಂಗಡ ವ್ಯಾಜ್ಯವಾಡಲೆಂದು ಹೇಳಿ ಆ ದಿನದಲ್ಲಿ ಅವನಿಗೆ ಯೆರುಬ್ಬಾಳನೆಂಬ ಹೆಸರಿಟ್ಟನು.
ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು.
ಅಲ್ಲಿ ಕರ್ತನು ತಮ್ಮ ಮುಂದೆ ಓಡಿಸಿಬಿಟ್ಟ ಅನ್ಯ ಜನಾಂಗಗಳ ಹಾಗೆ ಅವರು ಎಲ್ಲಾ ಉನ್ನತ ಸ್ಥಳಗಳಲ್ಲಿ ಧೂಪವನ್ನು ಸುಟ್ಟು ಕರ್ತನನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು--
ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
ಬಾಳ್ಪೆಗೊ ಯೋರಿಗೆ ಕೂಡಿಕೊಂಡು ಸತ್ತವರಿಗೆ ಅರ್ಪಿಸಿದ ಬಲಿಗಳನ್ನು ತಿಂದು
ರಕ್ತಬೋಳ ಸಾಂಬ್ರಾಣಿಗಳಿಂದಲೂ ವರ್ತಕರ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮ ಸ್ತಂಭ ಗಳ ಹಾಗೆಯೂ ಅಡವಿಯಿಂದ ಬರುವ ಇವಳಾರು?
ಫಲವತ್ತಾದ ತಗ್ಗಿನ ತಲೆಯ ಮೇಲಿರುವ ಬಾಡುವ ಹೂವಾದ ಅವರ ಅಲಂಕಾರದ ಶೃಂಗಾರವುಬೇಸಿಗೆ ಮುಂಚೆ ಹುಟ್ಟಿದ ಹಣ್ಣಿನ ಹಾಗೆ ಇರುವದು. ಅದನ್ನು ಕಂಡು ನೋಡಿದಾಕ್ಷಣವೇ ಕೈಗೆ ಸಿಕ್ಕಿದಾಗಲೇ ತಿಂದು ಬಿಡುವನು.
ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ.
ನಾಚಿಕೆಯಾದದ್ದು ನಮ್ಮ ಯೌವನದಾರಭ್ಯ ನಮ್ಮ ತಂದೆಗಳ ಕಷ್ಟವನ್ನೂ ಅವರ ಕುರಿಗಳನ್ನೂ ದನಗಳನ್ನೂ ಕುಮಾರರನ್ನೂ, ಕುಮಾ ರ್ತೆಯರನ್ನೂ ತಿಂದುಬಿಟ್ಟಿದೆ.ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
ಗೋಧಿಯನ್ನು ಬಿತ್ತಿ, ಮುಳ್ಳು ಗಳನ್ನು ಕೊಯ್ಯುವರು; ಕಷ್ಟಪಟ್ಟರೂ ಪ್ರಯೋಜನ ವಾಗುವದಿಲ್ಲ; ಕರ್ತನ ಕೋಪದ ಉರಿಯಿಂದ ನಿಮ್ಮ ಬೆಳೆಯ ವಿಷಯವಾಗಿ ನಾಚಿಕೆಪಡುವಿರಿ.
ಪ್ರವಾದಿಯಾದ ಯೆರೆವಿಾಯನು ಯೆಹೂ ದದ ಸಮಸ್ತ ಜನರಿಗೂ ಯೆರೂಸಲೇಮಿನ ಎಲ್ಲಾ ನಿವಾಸಿಗಳಿಗೂ ತಿಳಿಸಿದ್ದು ಏನಂದರೆ--
ಆಗ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿತ್ತು; ಪ್ರವಾದಿಯಾದ ಯೆರೆವಿಾಯನು ಯೆಹೂದದ ಅರಸನ ಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟನು.
ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು; ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ; ಅವರು ಐಗುಪ್ತದ ವಿಗ್ರಹಗಳನ್ನು ಬಿಡಲಿಲ್ಲ; ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಐಗುಪ್ತದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.
ಅವಳ ದ್ರಾಕ್ಷೇ ತೋಟಗಳನ್ನು ಅಲ್ಲಿರುವಾ ಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು; ಅಲ್ಲಿ ಅವಳು ಯೌವನದ ದಿನಗಳಲ್ಲಿಯೂ ಐಗುಪ್ತ ದೇಶದೊಳಗಿಂದ ಹೊರಟುಬಂದ ದಿನದಲ್ಲಿಯೂ ಆದ ಹಾಗೆ ಹಾಡುವಳು.
ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವಾಗಲೂ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವಾಗಲೂ ನಾನು ಶಿಕ್ಷಿಸುವದಿಲ್ಲ. ಯಾಕಂದರೆ ಸೂಳೆಯರ ಸಂಗಡ ತಮ್ಮನ್ನು ಬೇರ್ಪಡಿಸಿಕೊಂಡಿ ದ್ದಾರೆ; ಸೂಳೆಯರ ಸಂಗಡ ಬಲಿಅರ್ಪಿಸುತ್ತಾರೆ; ಆದದರಿಂದ ವಿವೇಕವಿಲ್ಲದ ಜನರು ಬಿದ್ದು ಹೋಗು ವರು.
ಇಸ್ರಾಯೇಲನು ಮಗುವಾಗಿದ್ದಾಗ ನಾನು ಅವನನ್ನು ಪ್ರೀತಿಮಾಡಿದೆನು, ಮತ್ತು ನನ್ನ ಮಗನನ್ನು ಐಗುಪ್ತದೊಳಗಿಂದ ಕರೆದೆನು.
ನಾನು ನಿನ್ನನ್ನು ಅರಣ್ಯದಲ್ಲಿಯೂ ಬಹು ಬಾಯಾರಿಕೆಯ ದೇಶದಲ್ಲಿಯೂ ತಿಳಿದುಕೊಂಡಿದ್ದೇನೆ.
ಹುಳಿಹಿಟ್ಟಿನ ಸಂಗಡ ಸ್ತೋತ್ರದ ಯಜ್ಞವನ್ನೂ ಅರ್ಪಿಸಿರಿ; ಉಚಿತವಾದ ಕಾಣಿಕೆಗಳನ್ನು ಸಾರಿಹೇಳಿರಿ. ಇಸ್ರಾಯೇಲಿನ ಮಕ್ಕಳೇ, ಹೀಗೆ ಮಾಡುವದು ನಿಮಗೆ ಇಷ್ಟವಾಗಿದೆ ಎಂದು ಕರ್ತನು ಹೇಳುತ್ತಾನೆ.
ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ.
ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.