Home Bibles ಯೆಶಾಯ 1:18 · ಕನ್ನಡ ಬೈಬಲ್
ಯೆಶಾಯ 1:18 · ಕನ್ನಡ ಬೈಬಲ್

ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.

Cross references

1 ಸಮುವೇಲ 12:7

ಆದದರಿಂದ ಈಗ ನಿಲ್ಲಿರಿ; ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಮಾಡಿದ ಸಮಸ್ತ ನೀತಿಯುಳ್ಳ ಕ್ರಿಯೆಗಳ ವಿಷಯ ಕರ್ತನ ಮುಂದೆ ನಿಮಗೆ ನ್ಯಾಯ ಹೇಳುತ್ತೇನೆ.

ಕೀರ್ತನೆಗಳು 51:7

ಹಿಸ್ಸೋಪ್‌ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.

ಕೀರ್ತನೆಗಳು 51:9

ನನ್ನ ಪಾಪಗಳನ್ನು ನೋಡದಂತೆ ನೀನು ವಿಮುಖನಾಗು; ನನ್ನ ಅಕ್ರಮಗಳನ್ನೆಲ್ಲಾ ಅಳಿಸಿ ಬಿಡು.

ಯೆಶಾಯ 1:23

ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.

ಯೆಶಾಯ 3:13

ಕರ್ತನು ವಾದಿಸುವದಕ್ಕೂ ಜನರಿಗೆ ನ್ಯಾಯ ತೀರಿಸುವದಕ್ಕೂ ಎದ್ದು ನಿಂತಿದ್ದಾನೆ.

ಯೆಶಾಯ 41:1

ಓ ದ್ವೀಪನಿವಾಸಿಗಳೇ, ನನ್ನ ಮುಂದೆ ಮೌನದಿಂದಿರ್ರಿ; ಜನಗಳು ಹೊಸ ಬಲ ವನ್ನು ಹೊಂದಿಕೊಳ್ಳಲಿ; ಅವರು ನನ್ನ ಸವಿಾಪಕ್ಕೆ ಬಂದು ಮಾತಾಡಲಿ; ನ್ಯಾಯತೀರ್ಪಿಗಾಗಿ ಸವಿಾಪಕ್ಕೆ ಒಟ್ಟಾಗಿ ಬರೋಣ.

ಯೆಶಾಯ 41:21

ನಿಮ್ಮ ವ್ಯಾಜ್ಯವನ್ನು ತನ್ನಿರಿ ಎಂದು ಕರ್ತನು ಅನ್ನುತ್ತಾನೆ; ನಿಮ್ಮ ಬಲವಾದ ಕಾರಣಗಳನ್ನು ತನ್ನಿರಿ ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ.

ಯೆಶಾಯ 43:24

ನೀನು ನನಗೋಸ್ಕರ ಹಣದಿಂದ ಗಂಧಕಾಷ್ಟವನ್ನು ಕೊಂಡು ಕೊಳ್ಳಲಿಲ್ಲ ಇಲ್ಲವೆ ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ತೊಂದರೆಗೊಳಿಸಿದ್ದೀ, ಅಕ್ರಮಗಳಿಂದ ನನ್ನನು ಬೇಸರಗೊಳಿಸಿದ್ದೀ.

ಯೆಶಾಯ 43:26

ನನಗೆ ಜ್ಞಾಪಕ ಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತ ನೆಂದು ಪ್ರಚುರಪಡಿಸು.

ಯೆಶಾಯ 44:22

ನಾನು ನಿನ್ನ ದ್ರೋಹಗಳನ್ನು ಗಾಢವಾದ ಮೇಘದಂತೆ ಅಳಿಸಿಬಿಟ್ಟಿದ್ದೇನೆ; ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನನ್ನ ಕಡೆಗೆ ತಿರಿಗಿಕೋ, ನಾನು ನಿನ್ನನ್ನು ವಿಮೋಚಿಸಿದ್ದೇನೆ.

ಯೆರೆಮಿಯ 2:5

ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ?

ಮೀಕ 6:2

ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ.

ಮೀಕ 7:18

ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.

ಅಪೋಸ್ತಲರ ಕೃತ್ಯಗಳು 17:2

ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್‌ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ

ಅಪೋಸ್ತಲರ ಕೃತ್ಯಗಳು 18:4

ಅವನು ಪ್ರತಿ ಸಬ್ಬತ್‌ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.

ಅಪೋಸ್ತಲರ ಕೃತ್ಯಗಳು 24:25

ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.

ರೋಮಾಪುರದವರಿಗೆ 5:20

ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.

ಎಫೆಸದವರಿಗೆ 1:6

ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.

ಪ್ರಕಟನೆ 7:14

ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.

Interlinear

Choose Theme