ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
Cross references
ಆದದರಿಂದ ಈಗ ನಿಲ್ಲಿರಿ; ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಮಾಡಿದ ಸಮಸ್ತ ನೀತಿಯುಳ್ಳ ಕ್ರಿಯೆಗಳ ವಿಷಯ ಕರ್ತನ ಮುಂದೆ ನಿಮಗೆ ನ್ಯಾಯ ಹೇಳುತ್ತೇನೆ.
ಹಿಸ್ಸೋಪ್ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.
ನನ್ನ ಪಾಪಗಳನ್ನು ನೋಡದಂತೆ ನೀನು ವಿಮುಖನಾಗು; ನನ್ನ ಅಕ್ರಮಗಳನ್ನೆಲ್ಲಾ ಅಳಿಸಿ ಬಿಡು.
ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.
ಕರ್ತನು ವಾದಿಸುವದಕ್ಕೂ ಜನರಿಗೆ ನ್ಯಾಯ ತೀರಿಸುವದಕ್ಕೂ ಎದ್ದು ನಿಂತಿದ್ದಾನೆ.
ಓ ದ್ವೀಪನಿವಾಸಿಗಳೇ, ನನ್ನ ಮುಂದೆ ಮೌನದಿಂದಿರ್ರಿ; ಜನಗಳು ಹೊಸ ಬಲ ವನ್ನು ಹೊಂದಿಕೊಳ್ಳಲಿ; ಅವರು ನನ್ನ ಸವಿಾಪಕ್ಕೆ ಬಂದು ಮಾತಾಡಲಿ; ನ್ಯಾಯತೀರ್ಪಿಗಾಗಿ ಸವಿಾಪಕ್ಕೆ ಒಟ್ಟಾಗಿ ಬರೋಣ.
ನಿಮ್ಮ ವ್ಯಾಜ್ಯವನ್ನು ತನ್ನಿರಿ ಎಂದು ಕರ್ತನು ಅನ್ನುತ್ತಾನೆ; ನಿಮ್ಮ ಬಲವಾದ ಕಾರಣಗಳನ್ನು ತನ್ನಿರಿ ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ.
ನೀನು ನನಗೋಸ್ಕರ ಹಣದಿಂದ ಗಂಧಕಾಷ್ಟವನ್ನು ಕೊಂಡು ಕೊಳ್ಳಲಿಲ್ಲ ಇಲ್ಲವೆ ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ತೊಂದರೆಗೊಳಿಸಿದ್ದೀ, ಅಕ್ರಮಗಳಿಂದ ನನ್ನನು ಬೇಸರಗೊಳಿಸಿದ್ದೀ.
ನನಗೆ ಜ್ಞಾಪಕ ಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತ ನೆಂದು ಪ್ರಚುರಪಡಿಸು.
ನಾನು ನಿನ್ನ ದ್ರೋಹಗಳನ್ನು ಗಾಢವಾದ ಮೇಘದಂತೆ ಅಳಿಸಿಬಿಟ್ಟಿದ್ದೇನೆ; ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನನ್ನ ಕಡೆಗೆ ತಿರಿಗಿಕೋ, ನಾನು ನಿನ್ನನ್ನು ವಿಮೋಚಿಸಿದ್ದೇನೆ.
ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ?
ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ.
ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ
ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.
ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.