Cross references
ಭೂಮಿಯು ತನ್ನ ಫಲವನ್ನು ಕೊಡುವದು; ನೀವು ತಿಂದು ತೃಪ್ತ ರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.
ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳಂತೆ ಮಾಡಿದರೆ
ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.
ನೋಡು, ನಾನು ಈಹೊತ್ತು ಜೀವವನ್ನೂ ಮರಣವನ್ನೂ, ಒಳ್ಳೇದನ್ನೂ ಕೆಟ್ಟದ್ದನ್ನೂ ನಿನ್ನ ಮುಂದೆ ಇಟ್ಟಿದ್ದೇನೆ.
ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.
ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.
ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ!
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು; ಯಾವವಂದರೆ--ಹಿಂದಿ ರುಗಿದ ಇಸ್ರಾಯೇಲೇ, ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ. ನಾನು ನನ್ನ ಕೋಪವನ್ನು ನಿನ್ನ ಮೇಲೆ ಬೀಳ ಮಾಡುವದಿಲ್ಲ; ನಾನು ದಯಾಪರನು ಎಂದು ಕರ್ತನು ಅನ್ನುತ್ತಾನೆ, ಎಂದೆಂದಿಗೂ ಕೋಪವಿಟ್ಟು ಕೊಳ್ಳುವದಿಲ್ಲ.
ನಾನು ಉಳಿದವರನ್ನು ಓಡಿಸಿದ ಎಲ್ಲಾ ಸ್ಥಳಗಳಲ್ಲಿ ಜೀವಕ್ಕಿಂತ ಮರಣವನ್ನೇ ಆಯ್ದುಕೊಳ್ಳುವರೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ಹೌದು, ಆಕಾಶ ದಲ್ಲಿ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿ ಯುತ್ತದೆ; ಪಾರಿವಾಳವೂ ಬಾನಕ್ಕಿಯೂ ಕೊಕ್ಕರೆಯೂ ತಾವು ಬರತಕ್ಕ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಕರ್ತನ ನ್ಯಾಯ ತೀರ್ಪನ್ನು ಅರಿಯರು.
ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.
ಓ ಇಸ್ರಾಯೇಲೇ, ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊ, ಯಾಕಂದರೆ ನೀನು ನಿನ್ನ ದುಷ್ಕೃತ್ಯದಿಂದ ಬಿದ್ದಿದ್ದೀ;
ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು ನಿಮ್ಮಲ್ಲಿ ಅದ್ಭುತದಿಂದ ನಡಿಸಿದ ನಿಮ್ಮ ದೇವರಾದ ಕರ್ತನ ಹೆಸರನ್ನು ಸ್ತುತಿಸುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.
ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.