ನಂಬಿಗಸ್ತಿಕೆಯ ಪಟ್ಟಣವು ಸೂಳೆಯಂತಾದ ಳಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆ ಯಾಗಿತ್ತು; ಆದರೆ ಈಗ ಕೊಲೆಗಾರರಿಂದ ತುಂಬಿದೆ.
Cross references
ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು.
ನೀವು ಈ ಕಾರ್ಯವನ್ನು ಕರ್ತನ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣ ಹೃದಯದಿಂದಲೂ ಮಾಡಬೇಕು.
ಅಧಿಕಾರಿಗಳು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಇದಲ್ಲದೆ ಹತ್ತು ಮಂದಿ ಯಲ್ಲಿ ಒಬ್ಬನು ಪರಿಶುದ್ಧ ಪಟ್ಟಣವಾದ ಯೆರೂ ಸಲೇಮಿನಲ್ಲಿ ವಾಸವಾಗಿರುವದಕ್ಕೂ ಉಳಿದ ಒಂಭತ್ತು ಮಂದಿ ಇತರ ಪಟ್ಟಣಗಳಲ್ಲಿ ವಾಸವಾಗಿರುವದಕ್ಕೂ ಚೀಟುಗಳನ್ನು ಹಾಕಿದರು.
ಒಂದು ನದಿ ಅದೆ; ಅದರ ಕಾಲುವೆಗಳು ದೇವರ ಪಟ್ಟಣವನ್ನೂ ಮಹೋನ್ನತನ ಗುಡಾರಗಳ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.
ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ.
ನಾವು ಹೇಗೆ ಕೇಳಿದೆವೋ ಹಾಗೆಯೇ ಸೈನ್ಯಗಳ ಕರ್ತನ ಪಟ್ಟಣದಲ್ಲಿ, ಅಂದರೆ ನಮ್ಮ ದೇವರ ಪಟ್ಟಣದಲ್ಲಿಯೇ ನೋಡಿದೆವು; ದೇವರು ಅದನ್ನು ಎಂದೆಂದಿಗೂ ಸ್ಥಿರಪಡಿಸುವನು. ಸೆಲಾ.
ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
ದುಷ್ಟನಿಗೆ ಕನಿಕರ ತೋರಿಸಿದಾಗ್ಯೂ ನೀತಿಯನ್ನು ಅವನು ಕಲಿಯಲಾರನು. ಯಥಾರ್ಥವಂತನ ದೇಶದಲ್ಲಿ ಅವನು ಅನ್ಯಾ ಯವನ್ನಾಚರಿಸುವನು ಮತ್ತು ಕರ್ತನ ಮಹತ್ವವನ್ನು ಲಕ್ಷಿಸುವದಿಲ್ಲ.
ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
ಆದರೆ ನೀವು ಮಾಟಗಾರತಿಯ ಮಕ್ಕಳೇ, ಸೂಳೆಯ ಮತ್ತು ಜಾರನ ಸಂತಾನದವರೇ, ಇಲ್ಲಿಗೆ ಬನ್ನಿರಿ.
ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ಆ ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ.
ಯೆರೂಸ ಲೇಮು ಘೋರವಾಗಿ ಪಾಪಮಾಡಿದೆ; ಆದದರಿಂದ ಅವಳು ತೆಗೆದುಹಾಕಲ್ಪಟ್ಟಿದ್ದಾಳೆ; ಅವಳನ್ನು ಸನ್ಮಾನಿಸಿ ದವರೆಲ್ಲರೂ ಅವಳನ್ನು ಹೀನೈಸುತ್ತಾರೆ; ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ; ಹೌದು, ಅವಳು ನಿಟ್ಟುಸಿರಿಟ್ಟು ಹಿಂದಕ್ಕೆ ತಿರುಗುತ್ತಾಳೆ.
ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇನಂದರೆ--
ಆದಕಾರಣ ಓ ವ್ಯಭಿಚಾರಿಣಿಯೇ, ನೀನು ಕರ್ತನ ವಾಕ್ಯವನ್ನು ಕೇಳು.
ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
ನೀನು ಹೇಳಬೇಕಾದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪಟ್ಟಣವು ಅದರ ಮಧ್ಯದಲ್ಲಿ ಅದರ ಕಾಲ ಬರುವ ಹಾಗೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧ ಮಾಡುವ ಹಾಗೆ ತನ್ನಲ್ಲಿ ವಿಗ್ರಹಗಳನ್ನು ಮಾಡಿಕೊಂಡಿದೆ.
ಎಫ್ರಾಯಾಮು ಸುಳ್ಳಿನಿಂದ ಮತ್ತು ಇಸ್ರಾ ಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, ಆದರೆ ಯೆಹೂದನು ಇನ್ನೂ ದೇವರ ಸಂಗಡ ಆಳುತ್ತಾನೆ; ಮತ್ತು ಪರಿಶುದ್ಧರ ಸಂಗಡ ನಂಬಿಗಸ್ತನಾಗಿದ್ದಾನೆ.
ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ,
ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಅಯ್ಯೋ!
ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು.
ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ
ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.
ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.