ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ ಮಲಿನವನ್ನು ಸ್ವಚ್ಚವಾಗಿ ಶುದ್ಧಮಾಡಿ ನಿನ್ನ ಎಲ್ಲಾ ಕಲ್ಮಷವನ್ನು ತೆಗೆದು ಬಿಡುವೆನು.
Cross references
ನಿನ್ನ ಬೆಳ್ಳಿಯು ಕಂದಾಯಿತು, ನಿನ್ನ ದ್ರಾಕ್ಷಾರಸವು ನೀರಿನೊಂದಿಗೆ ಬೆರಿಕೆಯಾಯಿತು.
ಕರ್ತನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಕುಮಾರ್ತೆ ಯರ ಕಲ್ಮಷವನ್ನು ತೊಳೆದು ಯೆರೂಸಲೇಮಿನ ಮಧ್ಯ ದಲ್ಲಿರುವ ರಕ್ತವನ್ನು ಶುದ್ಧೀಕರಿಸುವನು.
ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ
ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು; ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು; ಕರ್ತನು ತನ್ನ ಉಗ್ರದ ಸಂತತಿಯನ್ನು ನಿರಾಕರಿಸಿ ತಳ್ಳಿ ಬಿಟ್ಟಿದ್ದಾನೆ;
ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು.
ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ.
ಇದ ಲ್ಲದೆ ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧಮಾಡಿದವರನ್ನೂ ನಿಮ್ಮೊಳಗಿಂದ ಶುದ್ಧಿ ಮಾಡುತ್ತೇನೆ. ಅವರು ತಂಗುವ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ ನಾನೇ ಕರ್ತ ನೆಂಬದನ್ನು ಅವರಿಗೆ ತಿಳಿಸುತ್ತೇನೆ.
ಅವರು ಬೆಳ್ಳಿ, ಹಿತ್ತಾಳೆ, ಕಬ್ಬಿಣ, ಸೀಸ ಮತ್ತು ತಗಡುಗಳನ್ನು ಹೇಗೆ ಒಲೆಯೊಳಗೆ ಕೂಡಿಸಿ ಅದಕ್ಕೆ ಬೆಂಕಿಯನ್ನೂದಿ ಕರಗಿಸುವರೋ ಹಾಗೆಯೇ ನಾನು ನಿಮ್ಮನ್ನು ನನ್ನ ಕೋಪದಲ್ಲಿಯೂ ನನ್ನ ರೋಷದಲ್ಲಿಯೂ ಕರಗಿಸಿಬಿಡುವೆನು.
ಬೆಳ್ಳಿಯು ಕುಲುಮೆಯಲ್ಲಿ ಕರಗುವ ಹಾಗೆ ನೀವು ನನ್ನ ರೋಷಾಗ್ನಿಯಲ್ಲಿ ಕರಗು ವಿರಿ; ನಿನ್ನ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಕರ್ತನಾದ ನಾನೇ ಎಂದು ನಿಮಗೆ ತಿಳಿಯುತ್ತದೆ.
ಆ ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ.
ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು.
ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.