ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ ನಿನ್ನ ಆಲೋಚನಾ ಪರರನ್ನು ಪ್ರಾರಂಭ ದಲ್ಲಿದ್ದ ಹಾಗೆಯೂ ತಿರಿಗಿ ಒದಗಿಸಿಕೊಡುವೆನು: ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ ನಂಬಿಗಸ್ತಿಕೆಯ ಪಟ್ಟಣವೆಂದೂ ಕರೆಯಲ್ಪಡುವಿ.
Cross references
(ಆದರೆ ಮೋಶೆ ಎಂಬವನು ಭೂಮುಖದ ಮೇಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ಸಾತ್ವಿಕನಾಗಿದ್ದನು.)
ಆಗ ಮೋಶೆಯು ಬಹಳ ವಾಗಿ ಕೋಪಿಸಿಕೊಂಡು ಕರ್ತನಿಗೆ--ಅವರ ಬಲಿಯನ್ನು ನೀನು ಗೌರವಿಸಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ; ಇಲ್ಲವೆ ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ ಎಂದು ಹೇಳಿದನು.
ಇಗೋ, ಆ ಅರಸನು ಇನ್ನು ಮುಂದೆ ನಿಮ್ಮನ್ನು ನಡಿಸುತ್ತಾನೆ. ಈಗ ನಾನು ತಲೆನರೆತ ಮುದುಕನಾಗಿದ್ದೇನೆ. ಇಗೋ, ನನ್ನ ಕುಮಾರರು ನಿಮ್ಮ ಸಂಗಡ ಇದ್ದಾರೆ. ನಾನು ನನ್ನ ಬಾಲ್ಯದಿಂದ ಈ ದಿನದ ವರೆಗೂ ನಿಮ್ಮ ಮುಂದೆ ನಡಕೊಂಡಿದ್ದೇನೆ.
ನಂಬಿಗಸ್ತಿಕೆಯ ಪಟ್ಟಣವು ಸೂಳೆಯಂತಾದ ಳಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆ ಯಾಗಿತ್ತು; ಆದರೆ ಈಗ ಕೊಲೆಗಾರರಿಂದ ತುಂಬಿದೆ.
ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು.
ಕರ್ತನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಿನ ಲೋಕ ದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗ ಳಿಂದ ತುಂಬಿಸಿದ್ದಾನೆ.
ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.
ಹಿತ್ತಾಳೆಗೆ ಬದಲಾಗಿ ಬಂಗಾರವನ್ನು ತರುವೆನು; ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ ಮರಕ್ಕೆ ಬದಲಾಗಿ ಹಿತ್ತಾಳೆಯನ್ನೂ ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು, ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿಯೂ ನೀತಿಯನ್ನು ನಿನಗೆ ಅಧಿಕಾರಿ ಯನ್ನಾಗಿಯೂ ಮಾಡುವೆನು.
ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
ಚೀಯೋನಿಗೋಸ್ಕರ ನಾನು ಮೌನವಾಗಿರುವದಿಲ್ಲ; ಯೆರೂಸಲೇಮಿಗೋಸ್ಕರ ಅದರ ನೀತಿ ಪ್ರಕಾಶದಂತೆಯೂ ಅದರ ರಕ್ಷಣೆಯು ಉರಿಯುವ ದೀವಿಗೆಯಂತೆಯೂ ಹೊರಡುವ ವರೆಗೆ ನಾನು ವಿಶ್ರಾಂತಿಯಿಂದ ಇರುವದಿಲ್ಲ.
ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು; ಆದರೆ ಅವರು ನಿನ್ನ ಸ್ವರಕ್ಕೆ ಕಿವಿಗೊಡಲಿಲ್ಲ; ನಿನ್ನ ನ್ಯಾಯಪ್ರಮಾಣದಲ್ಲಿ ನಡಕೊಳ್ಳ ಲಿಲ್ಲ; ಮಾಡಬೇಕೆಂದು ನೀನು ಅವರಿಗೆ ಆಜ್ಞಾಪಿಸಿ ದ್ದನ್ನೆಲ್ಲಾ ಮಾಡಲಿಲ್ಲ. ಆದದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀ.
ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಅಂದರೆ ಲಾಕೀಷಿಗೂ ಅಜೇ ಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿ ದನು. ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ನಿಂತಿದ್ದವು.
ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು.
ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.
ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.
ಈ ಭೂಮಿಯು ಅವನಿಗೆ ಇಸ್ರಾಯೇಲಿನಲ್ಲಿ ಸ್ವಾಸ್ತ್ಯವಾಗಿರುವದು; ಆಗ ನನ್ನ ಪ್ರಭುಗಳು ನನ್ನ ಜನರನ್ನು ಉಪದ್ರವಪಡಿಸು ವದೇ ಇಲ್ಲ; ಉಳಿದ ಭೂಮಿಯನ್ನು ಇಸ್ರಾಯೇಲಿನ ಮನೆತನದವರಿಗೆ ಅವರ ಗೋತ್ರಗಳ ಅನುಸಾರವಾಗಿ ಕೊಡಲ್ಪಡುವದು.
ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.
ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯಮಾಡುವದಿಲ್ಲ; ಸುಳ್ಳು ಹೇಳುವದಿಲ್ಲ; ಅವರ ಬಾಯಲ್ಲಿ ಮೋಸದ ನಾಲಿಗೆ ಕಾಣುವದಿಲ್ಲ; ಅವರು ಮಂದೆಯಂತೆ ಮೇದು ಮಲಗುವರು; ಭಯಪಡಿಸು ವವನು ಒಬ್ಬನೂ ಇರುವದಿಲ್ಲ.
ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು.
ನಾನು ಅವರನ್ನು ತರುವೆನು; ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು; ಅವರು ನನ್ನ ಜನರಾಗಿ ರುವರು; ನಾನು ಸತ್ಯದಲ್ಲಿಯೂ ನೀತಿಯಲ್ಲಿಯೂ ಅವರ ದೇವರಾಗಿರುವೆನು.
ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.