ಚೀಯೋನು ನ್ಯಾಯತೀರ್ಪಿನಿಂದಲೂ ಅವಳ ಪರಿವರ್ತನೆಯನ್ನು ಹೊಂದಿದವರು ನೀತಿಯಿಂದಲೂ ಬಿಡುಗಡೆಯಾಗುವರು
Cross references
ಆದರೆ ಸೈನ್ಯಗಳ ಕರ್ತನು ನ್ಯಾಯತೀರ್ಪಿನಲ್ಲಿ ಉನ್ನತನಾಗಿ ರುವನು ಪರಿಶುದ್ಧನಾದ ದೇವರು ನೀತಿಯಲ್ಲಿ ಪರಿಶುದ್ಧ ನೆನಿಸಿಕೊಳ್ಳುವನು.
ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ.
ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು.
ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.
ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.
ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;