Home Bibles ಯೆಶಾಯ 1:31 · ಕನ್ನಡ ಬೈಬಲ್
ಯೆಶಾಯ 1:31 · ಕನ್ನಡ ಬೈಬಲ್

ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ನಾರು, ಅದನ್ನು ಮಾಡುವವನು ಕಿಡಿ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.

Cross references

ನ್ಯಾಯಾಧಿಪತಿಗಳು 15:14

ಅವನು ಲೆಹೀಗೆ ಬಂದಾಗ ಪಿಲಿಷ್ಟಿ ಯರು ಅವನಿಗೆ ಎದುರಾಗಿ ಬಂದು ಆರ್ಭಟಿಸಿದರು. ಕರ್ತನ ಆತ್ಮನು ಅವನ ಮೇಲೆ ಬಲವಾಗಿ ಬಂದದ್ದರಿಂದ ಅವನ ತೋಳುಗಳಲ್ಲಿ ಕಟ್ಟಿದ್ದ ಹಗ್ಗಗಳು ಬೆಂಕಿಯಿಂದ ಸುಟ್ಟುಹೋದ ದಾರದ ಹಾಗೆ ಆದವು. ಅವನ ಕೈಗಳಲ್ಲಿ ಇದ್ದ ಕಟ್ಟುಗಳು ಬಿಚ್ಚಿಬಿದ್ದವು.

ಯೆಶಾಯ 5:24

ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು.

ಯೆಶಾಯ 9:19

ಸೈನ್ಯಗಳ ಕರ್ತನ ಕೋಪೋದ್ರೇಕದಿಂದ ದೇಶವು ಕತ್ತಲೆಯಾಗಿದೆ; ಜನರು ಉರಿಯುವ ಸೌದೆಯಂತಿದ್ದಾರೆ; ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವದಿಲ್ಲ.

ಯೆಶಾಯ 26:11

ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.

ಯೆಶಾಯ 27:4

ರೌದ್ರವು ನನ್ನಲ್ಲಿ ಇಲ್ಲ; ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ ನಾನು ಅವುಗಳನ್ನು ಹಾದು ಹೋಗಿ ಅವುಗಳನ್ನು ಒಟ್ಟಿಗೆ ಸುಡುವೆನು.

ಯೆಶಾಯ 33:14

ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.

ಯೆಶಾಯ 34:9

ಪ್ರವಾಹಗಳು ಇಳಿಜಾರಾಗಿ ಮಾರ್ಪಡುವದೂ; ಅದರ ದೂಳು ಗಂಧಕವಾಗುವದು; ದೇಶವು ಉರಿ ಯುವ ಇಳಿಜಾರು ಪ್ರದೇಶವಾಗುವದು.

ಯೆಶಾಯ 43:17

ಯಾವಾತನು ರಥ ಕುದುರೆ ಗಳ ದಂಡನ್ನು ಪರಾಕ್ರಮರಾದವರನ್ನು ಹೊರಡಿಸಿ ಅವು ಒಟ್ಟಿಗೆ ಬಿದ್ದು ಏಳಲಾರದಂತೆಯೂ ದೀಪದೋ ಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿ ದನೋ ಆ ಕರ್ತನು ಇಂತೆನ್ನುತ್ತಾನೆ--

ಯೆಶಾಯ 50:11

ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.

ಯೆಶಾಯ 66:24

ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.

ಯೆಹೆಜ್ಕೇಲ 20:47

ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು.

ಯೆಹೆಜ್ಕೇಲ 32:21

ಶೂರರಲ್ಲಿ ಬಲಿಷ್ಠರೂ ಅವನಿಗೆ ಸಹಾಯ ಮಾಡಿದವರ ಸಂಗಡ ಪಾತಾಳದೊಳಗಿಂದ ಅವನ ಸಂಗಡ ಮಾತನಾಡುವರು; ಅವರು ಇಳಿದುಹೋಗಿ ಸುನ್ನತಿ ಯಿಲ್ಲದವರಾಗಿಯೂ ಕತ್ತಿಯಿಂದ ಹತರಾದವರಾ ಗಿಯೂ ಮಲಗಿದ್ದಾರೆ.

ಮಲಾಕಿ 4:1

ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಮತ್ತಾಯ 3:10

ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.

ಮಾರ್ಕ 9:43

ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;

ಪ್ರಕಟನೆ 6:14

ಆಕಾಶವು ಸುರುಳಿಯ ಹಾಗೆ ಸುತ್ತಲ್ಪಟ್ಟು ಹೋಗಿ ಬಿಟ್ಟಿತು; ಎಲ್ಲಾ ಬೆಟ್ಟಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚದರಿದವು.

ಪ್ರಕಟನೆ 14:10

ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.

ಪ್ರಕಟನೆ 19:20

ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.

ಪ್ರಕಟನೆ 20:10

ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.

Interlinear

Choose Theme