ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ನಾರು, ಅದನ್ನು ಮಾಡುವವನು ಕಿಡಿ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.
Cross references
ಅವನು ಲೆಹೀಗೆ ಬಂದಾಗ ಪಿಲಿಷ್ಟಿ ಯರು ಅವನಿಗೆ ಎದುರಾಗಿ ಬಂದು ಆರ್ಭಟಿಸಿದರು. ಕರ್ತನ ಆತ್ಮನು ಅವನ ಮೇಲೆ ಬಲವಾಗಿ ಬಂದದ್ದರಿಂದ ಅವನ ತೋಳುಗಳಲ್ಲಿ ಕಟ್ಟಿದ್ದ ಹಗ್ಗಗಳು ಬೆಂಕಿಯಿಂದ ಸುಟ್ಟುಹೋದ ದಾರದ ಹಾಗೆ ಆದವು. ಅವನ ಕೈಗಳಲ್ಲಿ ಇದ್ದ ಕಟ್ಟುಗಳು ಬಿಚ್ಚಿಬಿದ್ದವು.
ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು.
ಸೈನ್ಯಗಳ ಕರ್ತನ ಕೋಪೋದ್ರೇಕದಿಂದ ದೇಶವು ಕತ್ತಲೆಯಾಗಿದೆ; ಜನರು ಉರಿಯುವ ಸೌದೆಯಂತಿದ್ದಾರೆ; ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವದಿಲ್ಲ.
ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
ರೌದ್ರವು ನನ್ನಲ್ಲಿ ಇಲ್ಲ; ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ ನಾನು ಅವುಗಳನ್ನು ಹಾದು ಹೋಗಿ ಅವುಗಳನ್ನು ಒಟ್ಟಿಗೆ ಸುಡುವೆನು.
ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.
ಪ್ರವಾಹಗಳು ಇಳಿಜಾರಾಗಿ ಮಾರ್ಪಡುವದೂ; ಅದರ ದೂಳು ಗಂಧಕವಾಗುವದು; ದೇಶವು ಉರಿ ಯುವ ಇಳಿಜಾರು ಪ್ರದೇಶವಾಗುವದು.
ಯಾವಾತನು ರಥ ಕುದುರೆ ಗಳ ದಂಡನ್ನು ಪರಾಕ್ರಮರಾದವರನ್ನು ಹೊರಡಿಸಿ ಅವು ಒಟ್ಟಿಗೆ ಬಿದ್ದು ಏಳಲಾರದಂತೆಯೂ ದೀಪದೋ ಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿ ದನೋ ಆ ಕರ್ತನು ಇಂತೆನ್ನುತ್ತಾನೆ--
ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು.
ಶೂರರಲ್ಲಿ ಬಲಿಷ್ಠರೂ ಅವನಿಗೆ ಸಹಾಯ ಮಾಡಿದವರ ಸಂಗಡ ಪಾತಾಳದೊಳಗಿಂದ ಅವನ ಸಂಗಡ ಮಾತನಾಡುವರು; ಅವರು ಇಳಿದುಹೋಗಿ ಸುನ್ನತಿ ಯಿಲ್ಲದವರಾಗಿಯೂ ಕತ್ತಿಯಿಂದ ಹತರಾದವರಾ ಗಿಯೂ ಮಲಗಿದ್ದಾರೆ.
ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.
ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;
ಆಕಾಶವು ಸುರುಳಿಯ ಹಾಗೆ ಸುತ್ತಲ್ಪಟ್ಟು ಹೋಗಿ ಬಿಟ್ಟಿತು; ಎಲ್ಲಾ ಬೆಟ್ಟಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚದರಿದವು.
ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.
ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.