ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ.
Cross references
ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.
ಆಗ ಕರ್ತನು ಮೋಶೆಗೆ--ನೀನು ಇಳಿದು ಹೋಗು; ನೀನು ಐಗುಪ್ತ ದೇಶದೊಳಗಿಂದ ಬರ ಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.
ಇಗೋ, ಕರ್ತನ ಕೋಪವು ಇಸ್ರಾಯೇಲ್ ಕಡೆಗೆ ಇನ್ನೂ ಹೆಚ್ಚಾಗುವ ಹಾಗೆ ನೀವು ನಿಮ್ಮ ಪಿತೃಗಳಿಗೆ ಬದಲಾಗಿ ಪಾಪಿಗಳಾದ ಮನುಷ್ಯರ ಅಭಿವೃದ್ಧಿಯಾಗಿ ನಿಂತಿದ್ದೀರಿ.
ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು,
ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.
ಅವರು ತಮ್ಮನ್ನು ತಾವೇ ಕೆಡಿಸಿಕೊಂಡರು. ಅವರ ಗುರುತು ಆತನ ಮಕ್ಕಳಲ್ಲದವರ ಗುರುತು. ಅವರು ಮೂರ್ಖರಾದ ವಕ್ರಸಂತತಿಯೇ.
ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು.
ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿ--ನಮ್ಮ ದೇವರನ್ನು ಬಿಟ್ಟು ಬಾಳನನ್ನು ಸೇವಿಸಿದ್ದರಿಂದ ನಾವು ನಿನಗೆ ವಿರೋಧವಾಗಿ ಪಾಪ ಮಾಡಿದೆವು ಅಂದರು.
ತನ್ನ ತಂದೆಯು ನಡೆದ ಎಲ್ಲಾ ಮಾರ್ಗದಲ್ಲಿ ನಡೆದು ತನ್ನ ತಂದೆಯು ಸೇವಿಸಿದ ವಿಗ್ರಹಗಳನ್ನು ತಾನೂ ಸೇವಿಸಿ ಅವುಗಳನ್ನು ಆರಾಧಿಸಿದನು.
ರೆಹಬ್ಬಾಮನು ರಾಜ್ಯವನ್ನು ಸ್ಥಿರಮಾಡಿ ತನ್ನನ್ನು ಬಲಪಡಿಸಿಕೊಂಡಾಗ ಏನಾಯಿ ತಂದರೆ, ಅವನೂ ಅವನ ಸಂಗಡ ಸಮಸ್ತ ಇಸ್ರಾ ಯೇಲ್ಯರೂ ಕರ್ತನ ನ್ಯಾಯಪ್ರಮಾಣವನ್ನು ಬಿಟ್ಟು ಬಿಟ್ಟರು.
ಇವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು. ಆದರೆ ಕರ್ತನ ಮನೆಯಲ್ಲಿ ಪ್ರವೇಶಿಸಲಿಲ್ಲ. ಜನರು ಇನ್ನೂ ಕೆಟ್ಟದ್ದನ್ನು ಮಾಡುತ್ತಾ ಇದ್ದರು.
ದುಷ್ಟರು ಗರ್ಭದಿಂದಲೇ ದೂರವಾಗುತ್ತಾರೆ; ಹುಟ್ಟಿದಾಗಲೇ ಸುಳ್ಳಾಡುವವರಾಗಿ ತಪ್ಪಿಹೋಗುತ್ತಾರೆ.
ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು.
ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು.
ಹೌದು, ಅವರು ತಿರುಗಿಬಿದ್ದು ದೇವ ರನ್ನು ಪರೀಕ್ಷಿಸಿ ಇಸ್ರಾಯೇಲಿನ ಪರಿಶುದ್ಧನಿಗೆ ಮಿತಿ ಮಾಡಿದರು.
ತಮ್ಮ ಪಿತೃಗಳ ಹಾಗೆ ತಿರುಗಿಬಿದ್ದು ಅಪ ನಂಬಿಗಸ್ತರಾಗಿ ಮೋಸದ ಬಿಲ್ಲಿನ ಹಾಗೆ ವಾರೆ ಯಾದರು.
ನಮ್ಮ ಗುರಾಣಿಯು ಕರ್ತನೇ; ನಮ್ಮ ಅರಸನು ಇಸ್ರಾಯೇಲಿನ ಪರಿಶುದ್ಧನೇ.
ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.
ಯೆರೂಸಲೇಮು ಹಾಳಾಗಿದೆ, ಯೆಹೂ ದವು ಬಿದ್ದುಹೋಗಿದೆ, ಆದದರಿಂದ ಅವರ ನಡೆನುಡಿ ಗಳು ಕರ್ತನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿ ಯನ್ನು ಕೆರಳಿಸುತ್ತವಲ್ಲವೇ.
ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ; ನಾವು ಇಸ್ರಾ ಯೇಲಿನ ಪರಿಶುದ್ಧನ ಆಲೋಚನೆಯನ್ನು ತಿಳುಕೊ ಳ್ಳುವ ಹಾಗೆ ಅದು ಸವಿಾಪಿಸಿ ಬರಲಿ ಎಂದು ಹೇಳು ವವರಿಗೆ ಅಯ್ಯೋ!
ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು.
ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
ನೀನು ಅವರೊಂದಿಗೆ ಹೂಣಿಡುವಿಕೆ ಯಲ್ಲಿ ಕೂಡಿಕೊಳ್ಳದೆ ಇರುವಿ. ನಿನ್ನ ದೇಶವನ್ನು ನೀನು ನಾಶಮಾಡಿ ನಿನ್ನ ಜನರನ್ನು ಕೊಂದುಹಾಕಿದಿ. ಕೆಟ್ಟವರ ಸಂತಾನವು ಎಂದೆಂದಿಗೂ ಹೆಸರು ಹೊಂದು ವದಿಲ್ಲ.
ದೀನರ ಸಂತೋಷವು ಕರ್ತನಲ್ಲಿ ಹೆಚ್ಚಾಗುವದು, ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸು ವರು.
ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
ಏನಂದರೆ, ಇವರು ತಿರುಗಿ ಬೀಳುವ ಜನರು. ಸುಳ್ಳಾಡುವ ಮಕ್ಕಳು, ಕರ್ತನ ನ್ಯಾಯಪ್ರಮಾಣವನ್ನು ಕೇಳಲೊಲ್ಲದ ಮಕ್ಕಳು.
ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗ ದಿಂದ ತೊಲಗಿರಿ; ಇಸ್ರಾಯೇಲ್ಯರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.
ಇಸ್ರಾಯೇಲಿನ ಪರಿಶುದ್ಧ ಕರ್ತನಾದ ದೇವರು ಹೇಳುವದೇನೆಂದರೆ--ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.
ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ?
ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
ಆಗ ಕರ್ತನ ಹಸ್ತವು ಇದನ್ನು ಮಾಡಿದೆ ಎಂದೂ ಇಸ್ರಾ ಯೇಲಿನ ಪರಿಶುದ್ಧನು ಇದನ್ನು ಸೃಷ್ಟಿಸಿದನು ಎಂದೂ ಅವರು ನೋಡಿ, ತಿಳಿದು ಮನಸ್ಸಿಗೆ ತಂದು ಗ್ರಹಿಸಿ ಕೊಳ್ಳುವರು.
ಆದರೆ ನೀವು ಮಾಟಗಾರತಿಯ ಮಕ್ಕಳೇ, ಸೂಳೆಯ ಮತ್ತು ಜಾರನ ಸಂತಾನದವರೇ, ಇಲ್ಲಿಗೆ ಬನ್ನಿರಿ.
ಯಾರ ವಿಷಯದಲ್ಲಿ ಕುಚೋದ್ಯ ಮಾಡುತ್ತೀರಿ? ಯಾರ ವಿಷಯವಾಗಿ ನೀವು ಬಾಯಿ ಅಗಲ ಮಾಡಿ ನಾಲಿಗೆಯನ್ನು ಚಾಚುತ್ತೀರಿ?
ಇವರು ಯಾವಾಗಲೂ ನನ್ನ ಮುಖದೆ ದುರಿಗೆ ನನಗೆ ಕೋಪೋದ್ರೇಕವನ್ನು ಎಬ್ಬಿಸುವ ಜನರು; ತೋಟಗಳಲ್ಲಿ ಬಲಿ ಅರ್ಪಿಸಿ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪ ಸುಡುವರು;
ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ?
ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ?
ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.