Home Bibles ಯೆಶಾಯ 1:9 · ಕನ್ನಡ ಬೈಬಲ್
ಯೆಶಾಯ 1:9 · ಕನ್ನಡ ಬೈಬಲ್

ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.

Cross references

ಆದಿಕಾಂಡ 18:26

ಅದಕ್ಕೆ ಕರ್ತನು--ನನಗೆ ಸೊದೋಮ್‌ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ ಅವರಿಗೊಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು ಅಂದನು.

ಆದಿಕಾಂಡ 18:32

ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು.ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.

ಆದಿಕಾಂಡ 19:24

ಆಗ ಕರ್ತನು ಸೊದೋಮ್‌ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.

ದ್ವಿತೀಯೋಪದೇಶಕಾಂಡ 29:23

ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್‌ ಗೊಮೋರ ಅದ್ಮಾಚೆಬೋ ಯಾಮ್‌ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--

1 ಅರಸುಗಳು 19:18

ಆದರೆ ಬಾಳನಿಗೆ ಬೊಗ್ಗದೆ ಇರುವ ಸಕಲ ಮೊಣ ಕಾಲುಗಳೂ ಅದನ್ನು ಮುದ್ದಿಡದ ಸಕಲ ಬಾಯಿಗಳೂ ಆಗಿರುವ ಏಳು ಸಾವಿರ ಮಂದಿಯನ್ನು ಇಸ್ರಾಯೇ ಲಿನಲ್ಲಿ ನನಗೋಸ್ಕರ ಉಳಿಸಿಕೊಂಡಿದ್ದೇನೆ ಅಂದನು.

ಯೆಶಾಯ 6:13

ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್‌ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.

ಯೆಶಾಯ 10:20

ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು.

ಯೆಶಾಯ 17:6

ಆದರೂ ಎಣ್ಣೇ ಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿ ಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲು ಹಣ್ಣುಗಳು ಅದರಲ್ಲಿ ಉಳಿ ಯುವವು ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳುತ್ತಾನೆ.

ಯೆಶಾಯ 24:6

ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.

ಯೆಶಾಯ 24:13

ಎಣ್ಣೇ ಮರವನ್ನು ಬಡಿದ ಮೇಲೆಯೂ ದ್ರಾಕ್ಷೇ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವದು.

ಯೆಶಾಯ 37:4

ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.

ಯೆಶಾಯ 37:31

ಯೆಹೂದನ ಮನೆತನದಿಂದ ತಪ್ಪಿಸಿ ಕೊಂಡು ಉಳಿದವರು ತಿರುಗಿ ಕೆಳಗೆ ಬೇರೂರಿ ಮೇಲಕ್ಕೆ ಫಲಫಲಿಸುವರು.

ವಿಲಾಪಗಳು 3:22

ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ.

ವಿಲಾಪಗಳು 4:6

ನನ್ನ ಜನರ ಮಗಳ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು; ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲ್ಪಟ್ಟಿತು! ಅವಳನ್ನು ಯಾವ ಕೈಗಳೂ ತಡೆಯಲಿಲ್ಲ.

ಯೆಹೆಜ್ಕೇಲ 6:8

ಆದಾಗ್ಯೂ ನೀವು ದೇಶಗಳಲ್ಲಿ ಚದರಿಹೋಗುವಾಗ ಜನಾಂಗಗಳೊಳಗೆ ಕತ್ತಿ ಬೀಸಿದಾಗ ತಪ್ಪಿಸಿಕೊಳ್ಳು ವವರು ನಿಮ್ಮಲ್ಲಿರುವ ಹಾಗೆ ಕೆಲವರನ್ನು ಉಳಿಸುತ್ತೇನೆ.

ಯೆಹೆಜ್ಕೇಲ 14:22

ಆದಾಗ್ಯೂ ಇಗೋ, ಅದರಲ್ಲಿ ಕುಮಾರ ಕುಮಾರ್ತೆಯರಲ್ಲಿ ಕೆಲವರು ಹೇಗೂ ತಪ್ಪಿಸಿಕೊಂಡು ಅಲ್ಲಿಂದ ಉಳಿದು ಒಯ್ಯಲ್ಪಡುವರು. ಇಗೋ, ಅವರು ನಿಮ್ಮ ಬಳಿಗೆ ಬಂದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ತಂದ ಕೇಡಿನ ವಿಷಯವಾಗಿಯೂ ನಾನು ಅವರ ಮೇಲೆ ತಂದ ಎಲ್ಲವುಗಳ ವಿಷಯವಾಗಿಯೂ ಸಮಾಧಾನ ಹೊಂದು ವಿರಿ.ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.

ಯೋವೇಲ 2:32

ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್‌ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.

ಆಮೋಸ 4:11

ದೇವರು ಸೊದೋಮನ್ನೂ ಗೊಮೋರವನ್ನೂ ಕೆಡವಿದ ಹಾಗೆ ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ; ಹೌದು, ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.

ಹಬಕ್ಕೂಕ 3:2

ಕರ್ತನೇ, ವರುಷ ಗಳ ಮಧ್ಯದಲ್ಲಿ ನಿನ್ನ ಕೆಲಸವನ್ನು ಉಜ್ಜೀವಿಸಮಾಡು. ವರುಷಗಳ ಮಧ್ಯದಲ್ಲಿ ತಿಳಿಯಮಾಡು, ರೌದ್ರದಲ್ಲಿ ಕರುಣೆಯನ್ನು ಜ್ಞಾಪಕಮಾಡು;

ಸೆಫನ್ಯ 2:9

ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.

ಜೆಕರ್ಯ 13:8

ಕರ್ತನು--ಇದಲ್ಲದೆ ಸಮಸ್ತ ದೇಶದಲ್ಲಿ ಆಗುವದೇನಂದರೆ-- ಅದರಲ್ಲಿ ಎರಡು ಪಾಲು ಕಡಿಯಲ್ಪಟ್ಟು ಸಾಯುವದು; ಆದರೆ ಮೂರನೇ ಪಾಲು ಅದರಲ್ಲಿ ಬಿಡಲ್ಪಡುವದು.ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.

ಮತ್ತಾಯ 7:14

ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.

ಲೂಕ 17:29

ಆದರೆ ಲೋಟನು ಸೊದೋಮಿನಿಂದ ಹೊರಗೆ ಹೋದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಪಡಿಸಿದವು.

ರೋಮಾಪುರದವರಿಗೆ 9:27

ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.

ರೋಮಾಪುರದವರಿಗೆ 9:29

ಯೆಶಾಯನು ಮುಂದಾಗಿ--ಸೈನ್ಯಗಳ ಕರ್ತನು ನಮಗಾಗಿ ಸಂತಾನ ವನ್ನು ಉಳಿಸದೆ ಹೋಗಿದ್ದರೆ ನಾವು ಸೊದೋಮಿನ ಹಾಗೆ ಇರುತ್ತಿದ್ದೆವು; ಗೊಮೋರದ ಸ್ಥಿತಿಯು ನಮ್ಮದಾ ಗುತ್ತಿತ್ತು ಎಂದು ಹೇಳಿದನು.

ರೋಮಾಪುರದವರಿಗೆ 11:4

ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.

2 ಪೇತ್ರ 2:6

ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.

Interlinear

Choose Theme