ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.
Cross references
ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.
ಆಗ ಅವರ ಬೇಡಿಕೆಯಂತೆ ಅವರಿಗೆ ಆತನು ಕೊಟ್ಟನು; ಆದರೆ ಅವರ ಪ್ರಾಣದಲ್ಲಿ ಕ್ಷೀಣತೆಯನ್ನು ಕಳುಹಿಸಿದನು.
ಆಗ ಕುರಿಮರಿಗಳು ತಮಗೆ ಮನಸ್ಸು ಬಂದ ಹಾಗೆ ಮೇಯುವವು, ಕೊಬ್ಬಿದವರ ಹಾಳಾದವುಗಳನ್ನು ಅನ್ಯರು ತಿನ್ನುವರು.
ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ
ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
ಯುದ್ಧವೀರರ ಪ್ರತಿಯುದ್ಧವು ಗಲಿಬಿಲಿಯ ಗದ್ದಲ ದಿಂದ ಕೂಡಿದ್ದಾಗಿಯೂ ವಸ್ತ್ರಗಳು ರಕ್ತದಲ್ಲಿ ಹೊರಳಾ ಡಿದವುಗಳಾಗಿಯೂ ಇರುತ್ತವೆ; ಆದರೆ ಇವು ಬೆಂಕಿಗೆ ಆಹುತಿಯಾಗಿ ಸುಟ್ಟುಹೋಗುವವು.
ಅದು ದೇಹ ಮತ್ತು ಆತ್ಮಗಳನ್ನೂ ಅವನವನ ಹಾಗೂ ಫಲವತ್ತಾದ ಹೊಲವು ಹೊಂದಿರುವ ಘನತೆಯನ್ನೂ ದಹಿಸಿಬಿಡುವದು; ಅದು ಮೂರ್ಛೆ ಹೋಗುವ ರೋಗಿಯಂತಿರುವದು.
ಸೈನ್ಯಗಳ ಕರ್ತನು ಆಣೆಯಿಟ್ಟು ಹೇಳುವದೇನ ಂದರೆ--ನಾನು ನೆನಸಿದ ಪ್ರಕಾರವೇ ನೆರವೇರುವದು; ನಾನು ಉದ್ದೇಶಿಸಿದ್ದೇ ನಿಲ್ಲುವದು.
ಆ ದಿವಸದಲ್ಲಿ ಆಗುವದೇನಂದರೆ--ಯಾಕೋ ಬಿನ ವೈಭವ ತಗ್ಗುವದು; ಅದರ ಮಾಂಸದ ಕೊಬ್ಬು ಕರಗಿಸಲ್ಪಡುವದು.
ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
ಅದೂ ಅಲ್ಲದೆ ನಿನ್ನ ಅನ್ಯರ ಗುಂಪು ಸೂಕ್ಷ್ಮ ವಾದ ದೂಳಿನಂತಾಗುವದು, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರು ವದು; ಹೌದು, ಅದು ಕ್ಷಣ ಮಾತ್ರದಲ್ಲಿ ಫಕ್ಕನೆ ಆಗುವದು.
ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
ಕರ್ತನು ಹೀಗನ್ನುತ್ತಾನೆ--ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿ ಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.
ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ನೀನು ಕೇಳಿದ್ದೀ; ಆದರೆ ನೀನು ಅವುಗಳಿಗೆ ಹೆದರಬೇಡ.
ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.
ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
ಕರ್ತನಿಂದ ನಾನು ಸುದ್ದಿಯನ್ನು ಕೇಳಿದ್ದೇನೆ; ಅನ್ಯಜನಾಂಗಗಳೊಳಗೆ ರಾಯಭಾರಿಯು ಕಳುಹಿಸಲ್ಪಟ್ಟಿದ್ದಾನೆ; ನೀವು ಒಟ್ಟು ಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ.
ಆಗ ಸೈನ್ಯಗಳ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.