ಇಸ್ರಾಯೇಲಿನ ಬೆಳಕು ಬೆಂಕಿಯಾಗುವದು, ಅದರ ಪರಿಶುದ್ಧನು ಜ್ವಾಲೆ ಯಂತಿರುವನು; ಅದು ಒಂದೇ ದಿನದಲ್ಲಿ ಅವನ ಮುಳ್ಳು ದತ್ತೂರಿಗಳನ್ನು ದಹಿಸಿನುಂಗಿಬಿಡುವದು;
Cross references
ಜನರು ಗುಣುಗುಟ್ಟಿದಾಗ ಅದು ಕರ್ತನಿಗೆ ಮೆಚ್ಚಿಗೆಯಾಗಲಿಲ್ಲ. ಕರ್ತನು ಅದನ್ನು ಕೇಳಿ ಕೋಪಿಸಿಗೊಂಡನು. ಕರ್ತನ ಬೆಂಕಿಯು ಅವರಲ್ಲಿ ಹತ್ತಿ ಪಾಳೆಯದ ಕಟ್ಟಕಡೆಯ ಭಾಗದಲ್ಲಿ ದಹಿಸಿತು.
ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
ನಿನ್ನ ದೇವರಾದ ಕರ್ತನು ದಹಿಸುವ ಅಗ್ನಿಯೂ ರೋಷವುಳ್ಳ ದೇವರೂ ಆಗಿದ್ದಾನೆ.
ಆತನ ಮೂಗಿನಿಂದ ಹೊಗೆ ಎದ್ದು ಆತನ ಬಾಯಿಯೊಳಗಿಂದ ಬೆಂಕಿ ದಹಿಸಿತು; ಕೆಂಡಗಳು ಅದರಿಂದ ಉರಿದವು.
ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು.
ಕಾಡನ್ನು ಸುಡುವ ಬೆಂಕಿಯ ಹಾಗೆಯೂ ಬೆಟ್ಟಗಳನ್ನು ದಹಿಸುವ ಜ್ವಾಲೆಯ ಹಾಗೆಯೂ
ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
ಬೆಂಕಿಯು ಆತನ ಮುಂದೆ ಹೋಗಿ ಆತನ ವೈರಿಗಳನ್ನು ಸುತ್ತಲೂ ದಹಿಸುವದು.
ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ ಮುಳ್ಳುಗಳನ್ನು ನುಂಗಿಬಿಟ್ಟು ಅಡವಿಯ ಪೊದೆಗ ಳನ್ನು ಹತ್ತಿಕೊಳ್ಳಲು ಅದು ಹೊಗೆಹೊಗೆಯಾಗಿ ಸುತ್ತಿ ಕೊಂಡು ಮೇಲಕ್ಕೆ ಏರುತ್ತದೆ.
ರೌದ್ರವು ನನ್ನಲ್ಲಿ ಇಲ್ಲ; ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ ನಾನು ಅವುಗಳನ್ನು ಹಾದು ಹೋಗಿ ಅವುಗಳನ್ನು ಒಟ್ಟಿಗೆ ಸುಡುವೆನು.
ಇಗೋ, ಕರ್ತನ ನಾಮವು ದೂರದಿಂದ ಬರು ತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇ ಳುವ ಉರಿಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ನಾಲಿಗೆಯು ದಹಿಸುವ ಅಗ್ನಿ ಯಂತಿದೆ.
ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.
ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ?
ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು.
ಆಹಾ, ನೀನು ಆಕಾಶಗಳನ್ನು ಹರಿದು ಬಿಟ್ಟು, ಇಳಿದು ಬಂದಿದ್ದರೆ ಎಷ್ಟೋ ಚೆನ್ನಾ ಗಿತ್ತು! ಬಾ! ಬೆಟ್ಟಗಳು ನಿನ್ನ ಸಮ್ಮುಖದಲ್ಲಿ ಕರಗಲಿ! ಜನಾಂಗಗಳು ನಿನ್ನ ಸಮ್ಮುಖದಲ್ಲಿ ನಡುಗುವ ಹಾಗೆ,
ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.
ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
ಕರ್ತನಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ, ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸ ಕೂಡದ ಹಾಗೆ ಉರಿಯುವದು.
ಸುಗ್ಗಿ ಹೋಯಿತು, ಬೇಸಿಗೆಕಾಲ ತೀರಿತು; ಆದರೆ ನಾವು ರಕ್ಷಿಸಲ್ಪಡಲಿಲ್ಲ.
ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು.
ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು.
ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ
ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.
ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು.