ತನ್ನ ಜನರಾದ ಇಸ್ರಾಯೇಲ್ಯರು ಸಮುದ್ರದ ಮರಳಿನಂತೆ ಇದ್ದರೂ ಅವರಲ್ಲಿ ಉಳಿದವರು ಮಾತ್ರ ಹಿಂತಿರು ಗುವರು; ನಾಶವಾಗುವದಕ್ಕೆ ವಿಧಿಸಲ್ಪಟ್ಟದ್ದು ನೀತಿ ಯೊಂದಿಗೆ ತುಂಬಿ ತುಳುಕುವದು.
Cross references
ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
ಯೆಹೂದ ಮತ್ತು ಇಸ್ರಾಯೇಲ್ಯರು ತಿನ್ನುತ್ತಾ ಕುಡಿಯುತ್ತಾ ಸಂತೋಷಪಡುತ್ತಾ ಸಮುದ್ರದ ಬಳಿಯಲ್ಲಿರುವ ಮರಳಿನ ಹಾಗೆ ಹೆಚ್ಚಾಗಿದ್ದರು.
ಯೆರೂ ಸಲೇಮಿನಿಂದ ಉಳಿದವರೂ ಚಿಯೋನ್ ಪರ್ವತ ದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ಮಾಡುವದು.
ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ
ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.
ಕೋಟೆಯ ಪಟ್ಟಣವಾಗಿದ್ದಾಗ್ಯೂ ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವವು. ಅಲ್ಲಿನ ಚಿಗುರುಗಳನ್ನು ತಿಂದು ಬಿಡು ವವು.
ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.
ಯೆಹೂದನ ಮನೆತನದಿಂದ ತಪ್ಪಿಸಿ ಕೊಂಡು ಉಳಿದವರು ತಿರುಗಿ ಕೆಳಗೆ ಬೇರೂರಿ ಮೇಲಕ್ಕೆ ಫಲಫಲಿಸುವರು.
ವಿಮೋಚಕನು ಚೀಯೋನಿಗೂ ಯಾಕೋಬ್ಯರಲ್ಲಿ ತಮ್ಮ ದ್ರೋಹದಿಂದ ತಿರುಗುವವರಿಗೂ ಬರುವೆ ನೆಂದು ಕರ್ತನು ಅನ್ನುತ್ತಾನೆ.ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
ಹಿಂಜರಿದ ಮಕ್ಕಳೇ, ತಿರುಗಿಕೊಳ್ಳಿರೆಂದು ಕರ್ತನು ಅನ್ನುತ್ತಾನೆ; ನಾನು ನಿಮ್ಮನ್ನು ಮದುವೆಯಾಗಿದ್ದೇನೆ; ನಿಮ್ಮನ್ನು ಪಟ್ಟಣದೊಳಗಿಂದ ಒಬ್ಬನಂತೆಯೂ ಗೋತ್ರ ದೊಳಗಿಂದ ಇಬ್ಬರಂತೆಯೂ ತೆಗೆದುಕೊಂಡು ಚೀಯೋನಿಗೆ ಕರಕೊಂಡು ಬರುವೆನು.
ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ).
ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.
ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ.
ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.