ಸೈನ್ಯಗಳ ದೇವರಾದ ಕರ್ತನು ಎಲ್ಲಾ ದೇಶದ ಮಧ್ಯದಲ್ಲಿ ನಿಶ್ಚ ಯಿಸಲ್ಪಟ್ಟ ಕ್ಷೀಣತೆಯನ್ನು ಉಂಟುಮಾಡುವನು.
Cross references
ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.
ಇದೇ ಸಮಸ್ತ ಭೂಮಿಯ ವಿಷಯ ಆಲೋ ಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.
ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ.
ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.
ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.
ಆತನು ನೀತಿಯಲ್ಲಿ ಕಾರ್ಯವನ್ನು ಕ್ಲುಪ್ತಮಾಡಿ ಪೂರ್ತಿಗೊಳಿಸುತ್ತಾನೆ; ಕಾರಣವೇ ನಂದರೆ, ಕರ್ತನು ಭೂಮಿಯ ಮೇಲೆ ಒಂದು ಕ್ಲುಪ್ತ ವಾದ ಕಾರ್ಯವನ್ನು ಮಾಡುವನು.