ಆದದರಿಂದ ಸೈನ್ಯಗಳ ದೇವರಾದ ಕರ್ತನು ಇಂತೆ ನ್ನುತ್ತಾನೆ--ಚೀಯೋನಿನಲ್ಲಿ ವಾಸಿಸುವ ಓ ನನ್ನ ಜನರೇ, ಐಗುಪ್ತ್ಯರಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
Cross references
ಬನ್ನಿ, ಅವರು ಹೆಚ್ಚಾಗದ ಹಾಗೆಯೂ ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು ನಮಗೆ ವಿರೋಧವಾಗಿ ಯುದ್ಧಮಾಡಿ ದೇಶವನ್ನು ಬಿಟ್ಟು ಹೋಗದ ಹಾಗೆಯೂ ಅವ ರೊಂದಿಗೆ ಬುದ್ಧಿವಂತಿಕೆಯಿಂದ ವರ್ತಿಸೋಣ ಎಂದು ಹೇಳಿದನು.
ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು.
ಇಸ್ರಾಯೇಲ್ಯರು ಬಿಟ್ಟೀಕೆಲಸ ಮಾಡಿಸುವಂತೆ ಫರೋಹನ ಅಧಿಕಾರಿಗಳು ನೇಮಿಸಿ ದವರಿಗೆ--ನೀವು ಮೊದಲು ಇಟ್ಟಿಗೆಗಳ ಲೆಕ್ಕವನ್ನು ಒಪ್ಪಿಸಿದಂತೆ ನಿನ್ನೆ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ ಎಂದು ಹೇಳಿ ಅವರನ್ನು ಹೊಡಿಸಿದರು.
ಐಗುಪ್ತ್ಯರು ಅವರನ್ನು ಹಿಂದಟ್ಟಿದ್ದರು; ಅವರು ಸಮುದ್ರ ತೀರದಲ್ಲಿ ಇಳು ಕೊಂಡಿರುವಾಗ ಫರೋಹನ ಎಲ್ಲಾ ಕುದುರೆಗಳೂ ರಥಗಳೂ ಕುದುರೆ ಸವಾರರೂ ಅವನ ಸೈನ್ಯವೂ ಪೀಹಹೀರೋತಿನ ಸವಿಾಪದಲ್ಲಿ ಬಾಳ್ಚೆಫೋನಿನ ಎದುರಾಗಿ ಸವಿಾಪಿಸಿದರು.
ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು.
ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.
ಆಗ ಯೆಶಾಯನು ಅವರಿಗೆ -- ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನಂದರೆ -- ನೀನು ಕೇಳಿದಂಥ, ಅಶ್ಶೂರಿನ ಅರಸನ ಸೇವಕರು ನನ್ನನ್ನು ದೂಷಿಸಿದಂಥ, ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.
ಚೀಯೋನಿನ ವಿಷಯ ಹೇಳುವದೇನಂದರೆ --ಇಂಥಿಂಥವರು ಅದರಲ್ಲಿ ಹುಟ್ಟಿದರೆಂದೂ ಮಹೋ ನ್ನತನು ತಾನೇ ಅದನ್ನು ಸ್ಥಾಪಿಸುವನು.
ಹೀಗಿರುವಲ್ಲಿ ಚೀಯೋನಿನಲ್ಲಿ ಬಿಡಲ್ಪಟ್ಟವರು, ಯೆರೂಸಲೇಮಿನಲ್ಲಿ ಉಳಿದವರು, ಹಾಗೂ ಯೆರೂ ಸಲೇಮಿನಲ್ಲಿ ವಾಸಿಸುವವರೊಳಗೆ ಬರೆದಿರುವ ಪ್ರತಿ ಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡು ವನು.
ಇವರು ಯಾವದನ್ನು ಒಪ್ಪಂದ ಎಂದು ಹೇಳುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ.
ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.
ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಆತನ ಕೋಲು ಮುರಿದುಹೋಯಿ ತೆಂದು ನೀವು ಉಲ್ಲಾಸಿಸಬೇಡಿರಿ; ಹಾವಿನ ಸಂತಾನ ದಿಂದ ವಿಷಸರ್ಪವು ಉಂಟಾಗುವದು; ಅದರ ಫಲವು ಹಾರುವ ಅಗ್ನಿಮಯ ಸರ್ಪವೇ.
ಆತನನ್ನು ಹೊಡೆದವನನ್ನು ಹೊಡೆದ ಪ್ರಕಾರ ಅವನನ್ನು ಹೊಡೆದನೋ? ಇಲ್ಲವೆ ಆತನಿಂದ ಕೊಲ್ಲಲ್ಪಟ್ಟವರು ಕೊಲ್ಲಲ್ಪಟ್ಟ ಪ್ರಕಾರ ಅವನನ್ನು ಕೊಂದನೋ?
ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳು ವದೇ ಇಲ್ಲ. ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವನು. ಆತನು ಅದನ್ನು ಕೇಳಿದಾಗಲೇ ಸದುತ್ತರವನ್ನು ದಯಪಾಲಿಸು ವನು.
ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.
ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ನೀನು ಕೇಳಿದ್ದೀ; ಆದರೆ ನೀನು ಅವುಗಳಿಗೆ ಹೆದರಬೇಡ.
ಇಸ್ರಾಯೇಲ್ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ.
ಆದದರಿಂದ ಕರ್ತನು ಅಶ್ಶೂರದ ಅರಸನ ವಿಷಯವಾಗಿ ಹೇಳುವ ದೇನಂದರೆ ಅವನು ಈ ಪಟ್ಟಣಕ್ಕೆ ಬರಲಾರನು ಬಾಣವನ್ನು ಎಸೆಯನು, ಇಲ್ಲವೇ ಅದರ ಮುಂದೆ ಗುರಾಣಿಯೊಂದಿಗೆ ಬರಲಾರನು ಇಲ್ಲವೆ ಅದಕ್ಕೆ ವಿರೋಧವಾಗಿ ಮಣ್ಣಿನ ದಿಬ್ಬವನ್ನು ಹಾಕುವದಿಲ್ಲ.
ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ