ಸೈನ್ಯಗಳ ಕರ್ತನು ಓರೇಬನ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು.
Cross references
ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು. ಆಗ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು.
ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಕಷ್ಟದಿಂದ ಹೋಗು ವಂತೆ ಮಾಡಿದನು. ಆಗ--ಇಸ್ರಾಯೇಲಿನ ಎದುರಿ ನಿಂದ ಓಡಿಹೋಗೋಣ. ಯಾಕಂದರೆ ಕರ್ತನು ಐಗುಪ್ತ್ಯರಿಗೆ ವಿರೋಧವಾಗಿ ಅವರಿಗೋಸ್ಕರ ಯುದ್ಧ ಮಾಡುತ್ತಾನೆಂದು ಹೇಳಿಕೊಂಡರು.
ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನ್ನೂ ಜೇಬನ ಹಿಡಿದು ಓರೇಬನ್ನು ಓರೇಬೆಂಬ ಬಂಡೆಯಲ್ಲಿಯೂ ಜೇಬನ್ನು ಜೇಬನ ದ್ರಾಕ್ಷೇ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ ಮಿದ್ಯಾನ್ಯರನ್ನು ಹಿಂದಟ್ಟಿ ಓರೇಬ ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು.
ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.
ಫರೋಹನ ಮೇಲೆಯೂ ಅವನ ಸಮಸ್ತ ಸೇವಕರ ಮೇಲೆಯೂ ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚ ಕಕಾರ್ಯಗಳನ್ನೂ ಅದ್ಭುತಗಳನ್ನೂ ತೋರಿಸಿದಿ. ಯಾಕಂದರೆ ಇವರು ಅವರಿಗೆ ಅಹಂಕಾರಿಗಳಾಗಿ ನಡೆದರೆಂದು ತಿಳಿದಿದ್ದಿ. ಈ ಪ್ರಕಾರವೇ ನೀನು ಇಂದಿನ ಹಾಗೆ ನಿನಗೆ ಹೆಸರನ್ನು ಮಾಡಿಕೊಂಡಿದ್ದೀ.
ನನ್ನ ದೇವರೇ, ಕರ್ತನೇ, ನನ್ನ ನ್ಯಾಯಕ್ಕೂ ನನ್ನ ವ್ಯಾಜ್ಯಕ್ಕೂ ಎಚ್ಚರವಾಗಿ ಉದ್ರೇಕಗೊಳ್ಳು.
ಅವರನ್ನೂ ಅವರ ಅಧಿಪತಿಗಳನ್ನೂ ಓರೇಬ್ ಜೇಬ್ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೇಬಹ ಚಲ್ಮುನ್ನರ ಹಾಗೆಯೂ ಮಾಡು.
ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿ, ಶತ್ರು ವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದನು.
ನೀನು ಜನಾಂಗವನ್ನು ವೃದ್ಧಿಗೊಳಿಸಿದ್ದೀ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀ ಸುಗ್ಗಿಕಾಲದ ಸಂತೋಷ ದಂತೆಯೂ ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾ ಸಿಸುವ ಹಾಗೆಯೂ ನಿನ್ನ ಮುಂದೆ ಸಂತೋಷಿಸು ವರು.
ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.
ಆದದರಿಂದ ಸೈನ್ಯಗಳ ದೇವರಾದ ಕರ್ತನು ಇಂತೆ ನ್ನುತ್ತಾನೆ--ಚೀಯೋನಿನಲ್ಲಿ ವಾಸಿಸುವ ಓ ನನ್ನ ಜನರೇ, ಐಗುಪ್ತ್ಯರಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
ಕರ್ತನು ಅದರ ಮೇಲೆ ತರುವದಕ್ಕೆ ನೇಮಿ ಸಿದ ದಂಡವು ಹಾದುಹೋಗುವಲ್ಲೆಲ್ಲಾ ಅದು ದಮ್ಮಡಿ ಕಿನ್ನರಿಗಳ ಸಂಗಡ ಇರುವದು; ಆತನು ಗದ್ದಲವುಳ್ಳ ಯುದ್ಧಗಳಲ್ಲಿ ಅದರ ಸಂಗಡ ಯುದ್ಧಮಾಡುವನು.ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?
ಕೂಷಾನಿನ ಡೇರೆಗಳನ್ನು ಕಷ್ಟದೊಳಗೆ ನೋಡಿ ದೆನು; ಮಿದ್ಯಾನಿನ ದೇಶದ ತೆರೆಗಳು ನಡುಗಿದವು.
ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನುಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.