ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
Cross references
ಆಗ ನೆರೆಮನೆಯ ಸ್ತ್ರೀಯರು--ನೊವೊಮಿಗೆ ಒಬ್ಬ ಮಗನು ಹುಟ್ಟಿದ್ದಾನೆಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ದಾವೀದನ ತಂದೆಯಾದ ಇಷಯನಿಗೆ ತಂದೆ ಯಾದವನು.
ಆಗ ಸೌಲನು--ಯೌವನ ಸ್ತನೇ, ನೀನು ಯಾರ ಮಗನು ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು--ನಾನು ನಿನ್ನ ಸೇವಕ ನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು ಅಂದನು.
ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು.
ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು.
ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.
ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದ ಲ್ಲದೆ ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು; ಎಳೆಯದಾದ ಒಂದನ್ನು ಕತ್ತರಿಸಿ ಎತ್ತರವಾದ ಪರ್ವತದ ಮೇಲೆ ನಾಟುವೆನು.
ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.
ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
ಇಷಯನಿಂದ ಅರಸನಾದ ದಾವೀದನು ಹುಟ್ಟಿದನು. ಅರಸನಾದ ದಾವೀದನಿಂದ ಊರೀಯನ ಹೆಂಡತಿ ಯಾಗಿದ್ದವಳಲ್ಲಿ ಸೊಲೊಮೋನನು ಹುಟ್ಟಿದನು;
(ಕರ್ತನ ನ್ಯಾಯ ಪ್ರಮಾಣದಲ್ಲಿ ಬರೆದಿರುವಂತೆ--ಪ್ರತಿಯೊಂದು ಚೊಚ್ಚಲು ಗಂಡುಮಗು ಕರ್ತನಿಗೆ ಪರಿಶುದ್ಧವೆಂದು ಕರೆಯಲ್ಪಡಬೇಕು).
ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ
ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು.
ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.