ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
Cross references
ಎರಡನೆಯ ನದಿಯ ಹೆಸರು ಗೀಹೋನ್; ಅದು ಕೂಷ್ ದೇಶವನ್ನೆಲ್ಲಾ ಸುತ್ತುವದು.
ಇವರು ಜನಾಂಗಗಳ ದ್ವೀಪಗಳಲ್ಲಿ ಅವರವರ ದೇಶಗಳಲ್ಲಿ ಅವರವರ ಭಾಷೆಗಳ ಪ್ರಕಾರ ಅವರವರ ಕುಟುಂಬಗಳ ಪ್ರಕಾರ ಅವರವರ ಜನಾಂಗಗಳಲ್ಲಿ ವಿಭಾಗಿಸಲ್ಪಟ್ಟರು.
ಶಿನಾರ್ ದೇಶದಲ್ಲಿರುವ ಬಾಬೆಲ್ ಯೆರೆಕ್ ಅಕ್ಕದ್ ಕಲ್ನೇ ಎಂಬವು ಅವನ ಪ್ರಾರಂಭದ ರಾಜ್ಯ ಗಳಾಗಿದ್ದವು.
ಶೇಮನ ಮಕ್ಕಳು ಯಾರಂದರೆ, ಏಲಾಮ್ ಅಶ್ಶೂರ್ ಅರ್ಪಕ್ಷದ್ ಲೂದ್ ಅರಾಮ್.
ಇದಾದ ಮೇಲೆ ಅವರು ಪೂರ್ವ ದಿಕ್ಕಿನಿಂದ ಹೊರಟು ಪ್ರಯಾಣ ಮಾಡುವಾಗ ಶಿನಾರ್ ದೇಶದ ಬೈಲನ್ನು ಕಂಡುಕೊಂಡು ಅಲ್ಲಿ ವಾಸಮಾಡಿದರು.
ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಸಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಜನಾಂಗಗಳ ಅರಸನಾದ ತಿದ್ಗಾಲನು ಇವರ ದಿನಗಳಲ್ಲಿ ಆದದ್ದೇನಂದರೆ,
ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ
ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.
ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು.
ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು.
ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು.
ಬಾಷಾನಿನಿಂದ ತಿರಿಗಿ ಬರಮಾಡುವೆನು, ಸಮು ದ್ರದ ಅಗಾಧಗಳಿಂದ ನನ್ನ ಜನರನ್ನು ತಿರಿಗಿ ಬರ ಮಾಡುವೆನು ಎಂದು ಕರ್ತನು ಹೇಳಿದ್ದಾನೆ.
ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ?
ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು.
ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
ಆ ದಿವಸದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ಒಂದು ರಾಜಮಾರ್ಗವಿರುವದು. ಅಶ್ಶೂ ರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರ್ಯಕ್ಕೂ ಹೋಗಿ ಬರುವರು ಮತ್ತು ಐಗುಪ್ತ್ಯರು ಅಶ್ಶೂರ್ಯರೊಂದಿಗೆ (ಕರ್ತನನ್ನು) ಸೇವಿಸುವರು.
ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
ಏಲಾಮಿನ ಮನುಷ್ಯರ ಕುದುರೆ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿ ಯನ್ನು ತೆಗೆದರು.
ಆದದರಿಂದ ನೀವು ಕರ್ತನಿಗೆ ಬೆಂಕಿಯಲ್ಲಿಯೂ ಸಮುದ್ರದ ದ್ವೀಪಗಳಲ್ಲಿಯೂ ಇಸ್ರಾಯೇಲ್ಯರ ದೇವ ರಾದ ಕರ್ತನ ಹೆಸರನ್ನು ಘನಪಡಿಸಿರಿ.
ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು.
ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ.
ಅವರು ಕರ್ತನಿಗೆ ಮಹಿಮೆಯನ್ನು ಕೊಡಲಿ ಆತನ ಸ್ತೋತ್ರವನ್ನು ದ್ವೀಪಗಳಲ್ಲಿ ಪ್ರಕಟಿಸಲಿ.
ಕರ್ತನು ಹೇಳುವದೇನಂದರೆ--ಐಗುಪ್ತದ ಆದಾ ಯವೂ ಇಥಿಯೋಪ್ಯದ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವ ರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊ ಬ್ಬನು ಇಲ್ಲ, ಬೇರೆ ದೇವರು ಇಲ್ಲವೇ ಇಲ್ಲ.
ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
ನಾನೇ ಕರ್ತನೆಂದು ನನ್ನನ್ನು ತಿಳುಕೊಳ್ಳುವದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿ ರುವರು; ನಾನು ಅವರ ದೇವರಾಗಿರುವೆನು; ತಮ್ಮ ಪೂರ್ಣ ಹೃದಯದಿಂದ ನನ್ನ ಬಳಿಗೆ ಹಿಂತಿರುಗಿಕೊಳ್ಳು ವರು.
ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ.
ಇಗೋ, ನಾನು ಅವರನ್ನು ಉತ್ತರ ದೇಶ ದಿಂದ ಬರಮಾಡಿ ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ; ಅವರಲ್ಲಿ ಕುರುಡರೂ ಕುಂಟರೂ ಗರ್ಭಿಣಿಯಾದವರೂ ದಿನತುಂಬಿದ ಗರ್ಭಿಣಿಯರ ಸಹಿತವಾಗಿ ಇರುವರು; ದೊಡ್ಡ ಗುಂಪಾಗಿ ಇಲ್ಲಿಗೆ ಹಿಂತಿರುಗಿ ಬರುವರು.
ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆ ಹಾಕಿ, ಸಾಕ್ಷಿಗಳನ್ನಿಟ್ಟು ಬೆಳ್ಳಿಯನ್ನು ತ್ರಾಸಿನಲ್ಲಿ ತೂಕ ಮಾಡಿ ದೆನು.
ಹೀಗಾದರೂ ಈಗ ಅದು ಕತ್ತಿಯಿಂದಲೂ ಬರದಿಂದಲೂ ಜಾಡ್ಯದಿಂದಲೂ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದೆಂದು ನೀವು ಹೇಳುವ ಈ ಪಟ್ಟಣದ ವಿಷಯ ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--
ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆವಿಾಯನ ಬಾಯಿಂದ ಬಂದ ಹಾಗೆ ಪುಸ್ತಕದಲ್ಲಿ ಬರೆದ ಮೇಲೆ ಯೆರೆವಿಾಯನು ಅವನಿಗೆ ಹೇಳಿದ ವಾಕ್ಯವೆನಂದರೆ,
ಎಲ್ಲಾ ಭೂಮಿಯ ಸುತ್ತಿಗೆಯೂ ಹೇಗೆ ತುಂಡಾಗಿ ಮುರಿಯಲ್ಪಟ್ಟಿತು; ಬಾಬೆಲ್ ಹೇಗೆ ಜನಾಂಗಗಳೊಳಗೆ ಹಾಳಾಯಿತು!
ಆದದರಿಂದ ನೀವು ಹೇಳತಕ್ಕದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರನ್ನು ಅನ್ಯ ಜನಾಂಗ ಗಳಿಂದ ದೂರ ಹಾಕಿದ್ದಾಗ್ಯೂ ದೇಶಗಳನ್ನು ಚದರಿಸಿ ದ್ದಾಗ್ಯೂ ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದ ವರೆಗೆ ಪವಿತ್ರಾಲಯವಾಗಿರುವೆನು.
ನಿನ್ನ ಹುಟ್ಟು ಗೋಲನ್ನು ಬಾಷಾನಿನ ಓಕ್ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಯರ ದ್ವೀಪಗಳಿಂದ ತಂದ ದಂತದ ಹಲಗೆಗಳಿಂದ ಅಶ್ಶೂರ್ಯರ ಗುಂಪಿನವರು ಕೆತ್ತಿದ್ದಾರೆ.