ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು.
Cross references
ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು.
ಬಾಷಾನಿನಿಂದ ತಿರಿಗಿ ಬರಮಾಡುವೆನು, ಸಮು ದ್ರದ ಅಗಾಧಗಳಿಂದ ನನ್ನ ಜನರನ್ನು ತಿರಿಗಿ ಬರ ಮಾಡುವೆನು ಎಂದು ಕರ್ತನು ಹೇಳಿದ್ದಾನೆ.
ಕರ್ತನು ಯೆರೂಸಲೇಮನ್ನು ಕಟ್ಟುತ್ತಾನೆ; ಚದರಿಹೋದ ಇಸ್ರಾಯೇಲ್ಯರನ್ನು ಕೂಡಿಸುತ್ತಾನೆ.
ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
ಭೂಲೋಕದ ನಿವಾಸಿಗಳೆಲ್ಲರೇ! ಭೂಮಿಯಲ್ಲಿ ವಾಸ ವಾಗಿರುವವರೆಲ್ಲರೇ! ಬೆಟ್ಟಗಳಲ್ಲಿ ಆತನು ಧ್ವಜವನ್ನು ಎತ್ತುವಾಗ ನೋಡಿರಿ; ಅವನು ತುತೂರಿಯನ್ನೂದು ವಾಗ ಕೇಳಿರಿ.
ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು
ನನ್ನ ಬೆಟ್ಟ ಗಳನ್ನೆಲ್ಲಾ ಸಮದಾರಿಯನ್ನಾಗಿ ಮಾಡಿ ನನ್ನ ರಾಜ ಮಾರ್ಗಗಳನ್ನು ಉನ್ನತಪಡಿಸುವೆನು.
ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು.
ಇಸ್ರಾಯೇಲಿನ ತಳ್ಳಲ್ಪ ಟ್ಟವರನ್ನು ಕೂಡಿಸುವಂಥ ಕರ್ತನಾದ ದೇವರು ಹೇಳುವದೇನಂದರೆ--ನಾನು ಕೂಡಿಸಿದ ಇಸ್ರಾ ಯೇಲ್ಯರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು ಎಂದು ಹೇಳುತ್ತಾನೆ.
ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು.
ಹಾದುಹೋಗಿರಿ, ಬಾಗಿಲುಗಳನ್ನು ಹಾದು ಹೋಗಿರಿ. ಜನರಿಗೆ ದಾರಿಯನ್ನು ಸಿದ್ಧಮಾಡಿರಿ; ಎತ್ತರ ಮಾಡಿರಿ, ರಾಜ ಮಾರ್ಗವನ್ನು ಎತ್ತರಮಾಡಿರಿ; ಕಲ್ಲುಗಳನ್ನು ಆಯ್ದು ಕೂಡಿಸಿರಿ; ಜನಗಳಿಗೋಸ್ಕರ ಧ್ವಜವನ್ನು ಎತ್ತಿರಿ.
ಬಾಬೆಲಿನ ಅರಸನಾದ ನೆಬೂಕದೇಚ್ಚರನ ಹತ್ತೊಂಭತ್ತನೇ ವರುಷದ, ಐದನೇ ತಿಂಗಳಿನ, ಹತ್ತನೇ ದಿವಸದಲ್ಲಿ, ಬಾಬೆಲಿನ ಅರಸನ ಸೇವಕನೂ ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂ ಸಲೇಮಿಗೆ ಬಂದು,
ನಿಮ್ಮ ತಾಯಿಯ ಸಂಗಡ ವಾದಿಸಿರಿ, ವಾದಿಸಿರಿ; ಅವಳು ನನ್ನ ಹೆಂಡತಿಯಲ್ಲ; ಇಲ್ಲವೆ ನಾನು ಅವಳ ಗಂಡನಲ್ಲ; ಆದದರಿಂದ ಅವಳು ತನ್ನ ದೃಷ್ಟಿಯಿಂದ ತನ್ನ ವ್ಯಭಿಚಾರತ್ವಗಳನ್ನು ತನ್ನ ಸ್ತನಗಳ ಮಧ್ಯದಿಂದ ತನ್ನ ವ್ಯಭಿಚಾರಗಳನ್ನು ತೊಲಗಿಸಲಿ.
ಕೂಷಿನ ನದಿಗಳ ಆಚೆಯಿಂದ ನನ್ನ ಭಕ್ತರೂ ಚದರಿ ಹೋದವರ ನನ್ನ ಮಗಳೂ ನನ್ನ ಕಾಣಿಕೆಯನ್ನು ತರುವರು.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಜನರನ್ನು ಪೂರ್ವ ದಿಕ್ಕಿನ ದೇಶದಿಂದಲೂ ಪಶ್ಚಿಮ ದಿಕ್ಕಿನ ದೇಶದಿಂದಲೂ ರಕ್ಷಿಸುವೆನು.
ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು.
ಆಗ ಯೆಹೂದ್ಯರು--ನಾವು ಅವನನ್ನು ಕಾಣದ ಹಾಗೆ ಅವನು ಎಲ್ಲಿಗೆ ಹೋಗುವನು? ಅನ್ಯಜನರ ಮಧ್ಯದಲ್ಲಿ ಚದರಿಹೋದವರ ಬಳಿಗೆ ಹೋಗಿ ಅನ್ಯಜನರಿಗೆ ಬೋಧಿಸುವನೋ?
ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್) ಹನ್ನೆರಡು ಗೋತ್ರದವರಿಗೆ ವಂದನೆ.
ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;