ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
Cross references
ಕರ್ತನು ಮೋಶೆಗೆ--ನೀನು ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಐಗುಪ್ತದಲ್ಲಿರುವ ನೀರುಗಳ ಮೇಲೆಯೂ ನದಿ ಪ್ರವಾಹ ಕೆರೆ ಕೊಳ ಕುಂಟೆಗಳ ಮೇಲೆಯೂ ಕೈಚಾಚು ಎಂದು ಹೇಳು. ಆಗ ಅವು ರಕ್ತವಾಗುವವು; ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆ ಗಳಲ್ಲಾಗಲಿ ಕಲ್ಲಿನ ಪಾತ್ರೆಗಳಲ್ಲಾಗಲಿ ರಕ್ತವಿರುವದು ಎಂದು ಹೇಳಿದನು.
ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು.
ಹೀಗೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯ ದಲ್ಲಿ ಒಣ ನೆಲದಲ್ಲೇ ಹೊರಟು ಹೋದರು. ನೀರು ಅವರಿಗೆ ಎಡಬಲದಲ್ಲಿ ಗೋಡೆಯಾಗಿತ್ತು.
ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣ ಗಿದ ನೆಲದಮೇಲೆ ನಡೆದುಹೋದರು. ನೀರು ಅವರಿಗೆ ಎಡಬಲಗಳಲ್ಲಿ ಗೋಡೆಯಾಗಿತ್ತು.
ನೀನು ನಿನ್ನ ಬಲದಿಂದ ಸಮುದ್ರವನ್ನು ಭೇದಿಸಿದಿ; ತಿಮಿಂಗಿಲಗಳ ತಲೆಗಳನ್ನು ನೀರುಗಳಲ್ಲಿ ಜಜ್ಜಿಬಿಟ್ಟಿ.
ಅದೇ ದಿನದಲ್ಲಿ ಕರ್ತನು ನದಿಯ ಆಚೆಗಿರುವ ಅಶ್ಯೂರದ ರಾಜನೆಂಬವನಿಂದ ಬಾಡಿಗೆ ಕ್ಷೌರದ ಕತ್ತಿ ಯಿಂದ (ಯೆಹೂದದ) ತಲೆಯನ್ನು ಕಾಲುಕೂದ ಲನ್ನು ಬೋಳಿಸುವನು ಗಡ್ಡವನ್ನು ತೆಗೆದುಬಿಡುವನು.
ಇದಲ್ಲದೆ ಸಮುದ್ರದ ಕಡೆಯಿಂದ ನೀರು ಬತ್ತಿ ಹೋಗುವದು; ನದಿಗಳು ಇಂಗಿ ಒಣಗುವವು.
ಆ ದಿನದಲ್ಲಿ ಐಗುಪ್ತವು ಹೆಂಗಸರ ಹಾಗೆ ಇರು ವದು. ಸೈನ್ಯಗಳ ಕರ್ತನು ಅದರ ಮೇಲೆ ಆಡಿಸುವ ಕೈಯನ್ನು ಬೀಸುತ್ತಿರುವದರಿಂದ ಹೆದರಿ ಭಯಪಡು ವದು.
ನಾನು ಬಂದಾಗ ಯಾಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಯಾಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಹಸ್ತವು ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೇ ಬಿಡಿಸುವದಕ್ಕೆ ನನ್ನಲ್ಲಿ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಅರಣ್ಯವನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ವಿಾನುಗಳು ಬಾಯಾರಿ ಸತ್ತುನಾರುವವು.
ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?
ಆದದರಿಂದ ಇಗೋ, ನಾನು ನಿನಗೆ ವಿರೋಧ ವಾಗಿಯೂ ನಿನ್ನ ನದಿಗಳಿಗೆ ವಿರುದ್ಧವಾಗಿಯೂ ಇದ್ದೇನೆ. ಐಗುಪ್ತದೇಶವನ್ನು ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತ್ಯದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ.
ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು; ದೇಶವನ್ನು ಅದರ ಪರಿಪೂರ್ಣತೆಯನ್ನೂ ಅವರ ಅನ್ಯರ ಕೈಯಿಂದ ಹಾಳುಮಾಡುವೆನು. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
ಅವನು ಸಮುದ್ರವನ್ನು ಬಾಧೆಯಿಂದ ದಾಟುವನು; ಸಮುದ್ರದಲ್ಲಿ ತೆರೆಗಳನ್ನು ಬಡಿಯು ವನು; ನದಿಯ ಅಗಾಧಗಳೆಲ್ಲಾ ಒಣಗುವವು; ಅಶ್ಯೂರಿನ ಗರ್ವವು ತಗ್ಗಿಸಲ್ಪಡುವದು; ಐಗುಪ್ತದ ಮುದ್ರೆಕೋಲು ಹೋಗಿಬಿಡುವದು.ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.
ಆರನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಹೊಯ್ಯಲು ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಗುವಂತೆ ಅದರ ನೀರು ಬತ್ತಿ ಹೋಯಿತು.