ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
Cross references
ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ.
ಇದಲ್ಲದೆ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದ್ದನು. ಯಾಕಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಇಸ್ರಾಯೇಲ್ ಮಕ್ಕಳು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿ ಅವನ ಮಾತು ಕೇಳಿದರು.
ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.
ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
ನನ್ನ ಸವಿಾಪಕ್ಕೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಅಂದಿನಿಂದಲೂ ಅಲ್ಲಿ ನಾನು ಇದ್ದೇನೆ; ಈಗ ದೇವರಾದ ಕರ್ತನು ಆತನ ಆತ್ಮ ದೊಡನೆ ನನ್ನನ್ನು ಕಳುಹಿಸಿದ್ದಾನೆ.
ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
ಯೋಹಾನನು ಸಾಕ್ಷಿಕೊಟ್ಟು--ಆತ್ಮನು ಪಾರಿವಾಳ ದಂತೆ ಪರಲೋಕದಿಂದ ಇಳಿದು ಆತನ ಮೇಲೆ ನೆಲೆ ಗೊಂಡಿರುವದನ್ನು ನಾನು ನೋಡಿದೆನು.
ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
ಆತನು ಸತ್ಯದ ಆತ್ಮನೇ; ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದ ರಿಂದ ಆತನನ್ನು ಹೊಂದಲಾರದು. ಆದರೆ ನೀವು ಆತನನ್ನು ಬಲ್ಲಿರಿ. ಯಾಕಂದರೆ ಆತನು ನಿಮ್ಮೊಂದಿಗೆ ವಾಸಿಸುತ್ತಾನೆ ಮತ್ತು ನಿಮ್ಮೊಳಗಿರುವನು.
ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆದರಿಕನು ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ ಆತನು ನನ್ನ ವಿಷಯವಾಗಿ ಸಾಕ್ಷಿ ಕೊಡುವನು.ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ
ಆತ್ಮನಲ್ಲಿರುವ ನಿಮ್ಮ ಪ್ರೀತಿಯ ವಿಷಯದಲ್ಲಿ ನನಗೆ ತಿಳಿಸಿದವನೂ ಅವನೇ.
ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ;
ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಸ್ವಸ್ಥಬುದ್ಧಿಯ ಆತ್ಮವೇ ಹೊರತು ಭಯದ ಆತ್ಮವಲ್ಲ.
ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.