Home Bibles ಯೆಶಾಯ 11:9 · ಕನ್ನಡ ಬೈಬಲ್
ಯೆಶಾಯ 11:9 · ಕನ್ನಡ ಬೈಬಲ್

ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.

Cross references

ಯೋಬ 5:23

ಹೊಲದ ಕಲ್ಲುಗಳ ಸಂಗಡ ನಿನಗೆ ಒಡಂಬಡಿಕೆ ಇರುವದು; ಹೊಲದ ಮೃಗಗಳು ನಿನ್ನೊಂದಿಗೆ ಸಮಾ ಧಾನವಾಗಿರುವವು.

ಕೀರ್ತನೆಗಳು 22:27

ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.

ಕೀರ್ತನೆಗಳು 72:19

ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್‌. ಆಮೆನ್‌.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.

ಕೀರ್ತನೆಗಳು 98:2

ರ್ತನು ತನ್ನ ರಕ್ಷಣೆಯನ್ನು ತಿಳಿಯ ಮಾಡಿದ್ದಾನೆ; ತನ್ನ ನೀತಿಯನ್ನು ಜನಾಂಗಗಳ ದೃಷ್ಟಿಗೆ ಬಹಿರಂಗವಾಗಿ ಪ್ರಕಟಮಾಡಿದ್ದಾನೆ.

ಯೆಶಾಯ 2:4

ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.

ಯೆಶಾಯ 11:13

ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು.

ಯೆಶಾಯ 30:26

ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು.

ಯೆಶಾಯ 32:16

ನ್ಯಾಯವು ಅರಣ್ಯದಲ್ಲಿಯೂ ನೆಲೆಗೊ ಳ್ಳುವದು. ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವದು.

ಯೆಶಾಯ 33:6

ನಿನ್ನ ಕಾಲದಲ್ಲಿ ಸ್ಥಿರತೆಯಾ ಗಿಯೂ ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾ ಗಿಯೂ ಇರುವನು; ಕರ್ತನ ಭಯವೇ ಅವನ ಬೊಕ್ಕಸವಾಗಿರುವದು.

ಯೆಶಾಯ 35:9

ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.

ಯೆಶಾಯ 45:6

ಮೂಡಣದಿಂದ ಪಡುವಣದ ವರೆಗೆ ಇರುವವರೆಲ್ಲರೂ ತಿಳಿದುಕೊಳ್ಳುವಂತೆ ನನ್ನ ಹೊರತು ಯಾರೂ ಇಲ್ಲ, ನಾನೇ ಕರ್ತನು ಮತ್ತೊ ಬ್ಬನು ಇಲ್ಲ.

ಯೆಶಾಯ 49:6

ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.

ಯೆಶಾಯ 52:10

ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.

ಯೆಶಾಯ 59:19

ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು.

ಯೆಶಾಯ 60:1

ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.

ಯೆಶಾಯ 60:18

ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ.

ಯೆಶಾಯ 65:25

ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.

ಯೆರೆಮಿಯ 31:23

ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು; ಆದರೆ ಅವರು ನಿನ್ನ ಸ್ವರಕ್ಕೆ ಕಿವಿಗೊಡಲಿಲ್ಲ; ನಿನ್ನ ನ್ಯಾಯಪ್ರಮಾಣದಲ್ಲಿ ನಡಕೊಳ್ಳ ಲಿಲ್ಲ; ಮಾಡಬೇಕೆಂದು ನೀನು ಅವರಿಗೆ ಆಜ್ಞಾಪಿಸಿ ದ್ದನ್ನೆಲ್ಲಾ ಮಾಡಲಿಲ್ಲ. ಆದದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀ.

ಯೆರೆಮಿಯ 31:34

ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ.

ಯೆಹೆಜ್ಕೇಲ 47:5

ಇನ್ನೂ ಸಾವಿರ ಅಳೆದ ಮೇಲೆ ಅದು ನಾನು ದಾಟಲಾಗದಂತ ನದಿಯಾಗಿತ್ತು; ನೀರು ಹೆಚ್ಚಿ, ಈಜುವಷ್ಟಾಗಿ ದಾಟಲಾಗದಷ್ಟು ನದಿಯಾಗಿತ್ತು.

ಮೀಕ 4:2

ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.

ಹಬಕ್ಕೂಕ 2:14

ನೀರುಗಳು ಸಮುದ್ರವನ್ನು ಮುಚ್ಚುವ ಪ್ರಕಾರ ಭೂಮಿಯು ಕರ್ತನ ಮಹಿಮೆಯ ತಿಳುವಳಿಕೆಯಿಂದ ತುಂಬಿರುವದು.

ಜೆಕರ್ಯ 8:3

ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು.

ಜೆಕರ್ಯ 14:9

ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.

ಮತ್ತಾಯ 5:44

ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.

ಅಪೋಸ್ತಲರ ಕೃತ್ಯಗಳು 2:41

ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.

ಅಪೋಸ್ತಲರ ಕೃತ್ಯಗಳು 4:29

ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ

ರೋಮಾಪುರದವರಿಗೆ 11:25

ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ

ರೋಮಾಪುರದವರಿಗೆ 12:17

ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.

ಗಲಾತ್ಯದವರಿಗೆ 5:22

ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ

ಫಿಲಿಪ್ಪಿಯವರಿಗೆ 2:14

ಗುಣಗುಟ್ಟದೆ ಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ.

1 ತೆಸಲೋನಿಕದವರಿಗೆ 5:15

ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ.

ಪ್ರಕಟನೆ 20:2

ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.

ಪ್ರಕಟನೆ 21:27

ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.

Interlinear

Choose Theme