ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
Cross references
ಹೊಲದ ಕಲ್ಲುಗಳ ಸಂಗಡ ನಿನಗೆ ಒಡಂಬಡಿಕೆ ಇರುವದು; ಹೊಲದ ಮೃಗಗಳು ನಿನ್ನೊಂದಿಗೆ ಸಮಾ ಧಾನವಾಗಿರುವವು.
ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
ರ್ತನು ತನ್ನ ರಕ್ಷಣೆಯನ್ನು ತಿಳಿಯ ಮಾಡಿದ್ದಾನೆ; ತನ್ನ ನೀತಿಯನ್ನು ಜನಾಂಗಗಳ ದೃಷ್ಟಿಗೆ ಬಹಿರಂಗವಾಗಿ ಪ್ರಕಟಮಾಡಿದ್ದಾನೆ.
ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.
ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು.
ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು.
ನ್ಯಾಯವು ಅರಣ್ಯದಲ್ಲಿಯೂ ನೆಲೆಗೊ ಳ್ಳುವದು. ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವದು.
ನಿನ್ನ ಕಾಲದಲ್ಲಿ ಸ್ಥಿರತೆಯಾ ಗಿಯೂ ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾ ಗಿಯೂ ಇರುವನು; ಕರ್ತನ ಭಯವೇ ಅವನ ಬೊಕ್ಕಸವಾಗಿರುವದು.
ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
ಮೂಡಣದಿಂದ ಪಡುವಣದ ವರೆಗೆ ಇರುವವರೆಲ್ಲರೂ ತಿಳಿದುಕೊಳ್ಳುವಂತೆ ನನ್ನ ಹೊರತು ಯಾರೂ ಇಲ್ಲ, ನಾನೇ ಕರ್ತನು ಮತ್ತೊ ಬ್ಬನು ಇಲ್ಲ.
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.
ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು.
ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ.
ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು; ಆದರೆ ಅವರು ನಿನ್ನ ಸ್ವರಕ್ಕೆ ಕಿವಿಗೊಡಲಿಲ್ಲ; ನಿನ್ನ ನ್ಯಾಯಪ್ರಮಾಣದಲ್ಲಿ ನಡಕೊಳ್ಳ ಲಿಲ್ಲ; ಮಾಡಬೇಕೆಂದು ನೀನು ಅವರಿಗೆ ಆಜ್ಞಾಪಿಸಿ ದ್ದನ್ನೆಲ್ಲಾ ಮಾಡಲಿಲ್ಲ. ಆದದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀ.
ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ.
ಇನ್ನೂ ಸಾವಿರ ಅಳೆದ ಮೇಲೆ ಅದು ನಾನು ದಾಟಲಾಗದಂತ ನದಿಯಾಗಿತ್ತು; ನೀರು ಹೆಚ್ಚಿ, ಈಜುವಷ್ಟಾಗಿ ದಾಟಲಾಗದಷ್ಟು ನದಿಯಾಗಿತ್ತು.
ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.
ನೀರುಗಳು ಸಮುದ್ರವನ್ನು ಮುಚ್ಚುವ ಪ್ರಕಾರ ಭೂಮಿಯು ಕರ್ತನ ಮಹಿಮೆಯ ತಿಳುವಳಿಕೆಯಿಂದ ತುಂಬಿರುವದು.
ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು.
ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.
ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ
ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ
ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.
ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
ಗುಣಗುಟ್ಟದೆ ಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ.
ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ.
ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.
ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.