ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.
Cross references
ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು.
ಹಾಡುವವರೂ ವಾದ್ಯ ಗಳನ್ನು ಬಾರಿಸುವವರೂ ಇದ್ದಾರೆ; ನನ್ನ ಬುಗ್ಗೆಗಳೆಲ್ಲಾ ನಿನ್ನಲ್ಲಿಯೇ.
ಅಡವಿಯ ಗಿಡಗಳಲ್ಲಿ ಸೇಬು ಮರ ಹೇಗೋ ಕುಮಾರರಲ್ಲಿ ನನ್ನ ಪ್ರಿಯನು ಹಾಗೆಯೇ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತು ಕೊಂಡೆನು; ಅವನ ಫಲವು ನನ್ನ ರುಚಿಗೆ ಮಧುರ ವಾಗಿತ್ತು.
ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.
ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.
ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು.
ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.
ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.
ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.
ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.