ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ.
Cross references
ಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು; ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ. ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು.
ಆ ದಿವಸದಲ್ಲಿ ಆಗುವದೇನಂದರೆ--ಕರ್ತನು ಉನ್ನತದಲ್ಲಿರುವ ಉನ್ನತವಾದವರ ಸೈನ್ಯವನ್ನೂ ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸು ವನು.
ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
ನಾನು ಆಕಾಶಗಳಿಗೆ ಅಂಧಕಾರವನ್ನು ಹೊದಿಸಿ ಗೋಣೀತಟ್ಟನ್ನು ಅದರ ಹೊದಿಕೆಯನ್ನಾಗಿ ಮಾಡುವೆನು.
ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗ ಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.
ಆಕಾಶದಲ್ಲಿ ಪ್ರಕಾಶಿ ಸುವ ಬೆಳಕುಗಳನ್ನು ನಿನ್ನ ನಿಮಿತ್ತವಾಗಿ ನಾನು ಕತ್ತಲು ಮಾಡುವೆನು; ಆ ಕತ್ತಲೆಯನ್ನು ನಿನ್ನ ದೇಶದ ಮೇಲೆ ಇಡುತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ.
ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ.
ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
ಸೂರ್ಯ, ಚಂದ್ರ ಕಪ್ಪಾಗುವವು; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವವು.
ದೇವರಾದ ಕರ್ತನು ಹೇಳುತ್ತಾನೆ--ಆ ದಿನದಲ್ಲಿ ಆಗುವದೇನಂದರೆ, ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡು ತ್ತೇನೆ.
ಆ ದಿನವು ರೌದ್ರದ ದಿನವು, ಇಕ್ಕಟ್ಟು ಸಂಕಟಗಳ ದಿನವು, ಹಾಳು ಪಾಳುಗಳ ದಿನವು, ಕತ್ತಲೆ ಮೊಬ್ಬುಗಳ ದಿನವು, ಮೇಘ ಮೋಡಗಳ ದಿನವು.
ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.
ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.
ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.
ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.