ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು.
Cross references
ಮನುಷ್ಯನ ಕ್ರೋಧವು ಮತ್ಸರವಾಗಿದೆ; ಆದದರಿಂದ ಮುಯ್ಯಿ ತೀರಿಸುವ ದಿನದಲ್ಲಿ ಅವನು ಕ್ಷಮೆತೋರುವದಿಲ್ಲ.ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.
ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ ನನ್ನ ಮಹಿಮೆಯಲ್ಲಿ ಉಲ್ಲಾಸಿಸುವವರನ್ನೂ ಶೂರರನ್ನೂ ನನ್ನ ಕೋಪಕ್ಕೆ ಕರೆದಿದ್ದೇನೆ.
ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
ಉತ್ತರ ದಿಕ್ಕಿನಿಂದ ಒಬ್ಬನನ್ನು ನಾನು ಎಬ್ಬಿಸಿದ್ದೇನೆ, ಸೂರ್ಯೋ ದಯದ ಕಡೆಯಿಂದ ಅವನು ನನ್ನ ಹೆಸರನ್ನು ಸ್ಮರಿಸು ವನು; ಅವನು ಜೇಡಿಮಣ್ಣಿನಂತೆಯೂ ಕುಂಬಾರನು ಮಣ್ಣನ್ನು ತುಳಿಯುವಂತೆಯೂ ಅಧಿಕಾರಸ್ಥರ ಮೇಲೆ ಬರುವನು.
ನಾವು ಬಾಬೆಲನ್ನು ವಾಸಿಮಾಡುವದಕ್ಕಿದ್ದೆವು. ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳ ವರೆಗೂ ಏಳುತ್ತದೆ.
ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.
ಆಗ ಬಾಬೆಲಿನ ಅರಸನು ಅವರನ್ನು ಹೊಡಿಸಿ, ಹಮಾತ್ ದೇಶದ ರಿಬ್ಲದಲ್ಲಿ ಕೊಂದು ಹಾಕಿಸಿದನು. ಈ ಪ್ರಕಾರ ಯೆಹೂದನು ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಟ್ಟನು.
ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.