ಜನರು ಅವರನ್ನು ತೆಗೆದುಕೊಂಡು ತಮ್ಮ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಕರ್ತನ ದೇಶದಲ್ಲಿ ಆ ಜನಾಂಗದ ವರನ್ನು ಗಂಡು ಹೆಣ್ಣಾಳುಗಳನ್ನಾಗಿ (ದಾಸದಾಸಿಯ ರನ್ನಾಗಿ) ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದ ವರನ್ನು ಸೆರೆಹಿಡಿಯುವರು, ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರನಡಿಸುವರು.
Cross references
ನಿನ್ನ ಸುತ್ತಲೂ ಇರುವ ಅನ್ಯಜನರು ನಿನಗೆ ದಾಸದಾಸಿಯ ರಾಗಿರುವಂತೆ ಅವರಿಂದ ದಾಸದಾಸಿಯರನ್ನು ನೀನು ಕೊಂಡುಕೊಳ್ಳಬೇಕು.
ಅವರ ಹೊರತು ಅವರ ದಾಸರೂ ದಾಸಿಗಳೂ ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ ಇದ್ದರು. ಮತ್ತು ಅವರಿಗೆ ಹಾಡುಗಾರರೂ ಹಾಡುಗಾರ್ತಿಯರೂ ಇನ್ನೂರು ಮಂದಿ ಇದ್ದರು.
ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
ಚದರಿಸಲ್ಪಟ್ಟು ಸೂರೆಯಾಗಿರುವ ಜನರೂ ಅವರು ಹುಟ್ಟಿದಂದಿನಿಂದ ಇಲ್ಲಿಯ ವರೆಗೂ ಭಯಂಕರವಾದ ಜನರೂ ಮಹಾಬಲದಿಂದ ತುಳಿಯಲ್ಪಡುವರು. ನದಿ ಗಳಿಂದ ಹಾಳಾಗಿರುವ ದೇಶದವರು ಸೈನ್ಯಗಳ ಕರ್ತನ ಹೆಸರಿನ ಸ್ಥಳವಾದ ಚೀಯೋನ್ ಪರ್ವತಕ್ಕೆ ಆತನಿ ಗೊಸ್ಕರ ಕಾಣಿಕೆಯನ್ನು ತರುವರು.
ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು.
ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು.
ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ.
ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.
ಇದಲ್ಲದೆ ಅನ್ಯರು ನಿಂತು ನಿಮ್ಮ ಮಂದೆಗಳನ್ನು ಮೇಯಿಸುವರು; ಪರರ ಪುತ್ರರು ನಿಮಗೆ ನೇಗಿಲು ಹೂಡುವವರೂ ದ್ರಾಕ್ಷೇತೋಟ ಕಾಯುವವರೂ ಆಗಿರುವರು.
ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನದಿಯಂತೆ ಸಮಾಧಾನವನ್ನೂ ಹರಿಯುವ ಹಳ್ಳ ದಂತೆ ಜನಾಂಗಗಳ ವೈಭವವನ್ನೂ ಅವಳ ಕಡೆಗೆ ಬರಮಾಡುವೆನು; ಆಗ ನೀವು ಅವುಗಳನ್ನು ಹೀರಿ ಕೊಂಡು ಅವಳ ಪಕ್ಕೆಗಳಲ್ಲಿ ಹೊರಲ್ಪಡುವಿರಿ, ಅವಳ ಮೊಣಕಾಲುಗಳ ಮೇಲೆ ಆಡಿಸಲ್ಪಡುವಿರಿ,
ಕರ್ತನು ಹೀಗೆ ಹೇಳು ತ್ತಾನೆ--ನಿನ್ನ ಸ್ವರವನ್ನು ಅಳದ ಹಾಗೆಯೂ ಕಣ್ಣುಗಳು ಕಣ್ಣೀರು ಇಡದ ಹಾಗೆಯೂ ಬಿಗಿ ಹಿಡಿ; ನಿನ್ನ ಕೆಲಸಕ್ಕೆ ಪ್ರತಿಫಲ ಉಂಟೆಂದು ಕರ್ತನು ಅನ್ನುತ್ತಾನೆ; ಅವರು ಶತ್ರುವಿನ ದೇಶದಿಂದ ತಿರುಗಿ ಬರುವರು.
ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;
ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.
ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.
ಇದನ್ನು ಮಾಡುವದಕ್ಕೆ ಋಣಸ್ಥರಾಗಿರುವದರಿಂದ ಅವರು ನಿಜವಾಗಿಯೂ ಇಷ್ಟಪಟ್ಟಿದ್ದಾರೆ. ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದವುಗಳಲ್ಲಿ ಪಾಲುಗಾರರಾದ ಮೇಲೆ ಶರೀರಸಂಬಂಧವಾದ ವುಗಳಲ್ಲಿಯೂ ಅವರಿಗೆ ಸೇವೆ ಮಾಡುವದು ಮಾತ್ರ ವಲ್ಲದೆ ಅದು ಅವರ ಕರ್ತವ್ಯವೂ ಆಗಿದೆ.
ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು.
ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ.
ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು
ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಸೇರಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು.
ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.