ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Cross references
ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ.
ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು.
ಆದರೆ ಮರುಭೂಮಿಯ ಕಾಡುಮೃಗಗಳು ಅಲ್ಲಿ ಮಲಗುವವು; ಅವರ ಮನೆಗಳು ವ್ಯೆಥೆಯಿಂದ ತುಂಬಿರುವವು; ಅಲ್ಲಿ ಗೂಬೆಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
ಆದರೆ ಬಕ ಪಕ್ಷಿಯು ಮತ್ತು ಮುಳ್ಳು ಹಂದಿಯು ಅದನ್ನು ಆವರಿಸಿಕೊಳ್ಳುವವು; ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವವು; ಗಲಿಬಿಲಿ ಯೆಂಬ ನೂಲನ್ನು ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು.
ಅವರ ಉರಿಯಲ್ಲಿ ನಾನು ಅವರ ಔತಣವನ್ನು ಸಿದ್ಧಮಾಡುವೆನು; ಅವರು ಉಲ್ಲಾಸಿಸಿ ನಿತ್ಯವಾದ ನಿದ್ರೆಯನ್ನು ಮಾಡಿ ಎಚ್ಚರವಾಗದ ಹಾಗೆ ಅವರಿಗೆ ಅಮಲೇರಿಸುವೆನೆಂದು ಕರ್ತನು ಅನ್ನುತ್ತಾನೆ.
ಯುದ್ಧಸ್ಥರ ಮೇಲೆ ನೇಮಿಸಲ್ಪಟ್ಟಿದ್ದ ಒಬ್ಬ ಮನೇವಾರ್ತೆಯವನನ್ನೂ ಅರಸನ ಸನ್ನಿಧಾನದಲ್ಲಿ ನಿಂತವರೊಳಗೆ ಪಟ್ಟಣದಲ್ಲಿ ಸಿಕ್ಕಿದ ಏಳು ಮನುಷ್ಯರನ್ನೂ ದೇಶಸ್ಥರನ್ನೂ ದಂಡಿನವರ ಲೆಕ್ಕದಲ್ಲಿ ಸೇರಿಸಿದ ಸೈನ್ಯಾಧಿಪತಿಯ ಲೇಖಕನನ್ನೂ ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶಸ್ಥರಲ್ಲಿ ಅರುವತ್ತು ಮನುಷ್ಯರನ್ನೂ ಪಟ್ಟಣದೊಳಗಿಂದ ತಕ್ಕೊಂಡನು.
ಅದರ ಮಧ್ಯದಲ್ಲಿ ಮಂದೆಗಳೂ ಜನಾಂಗಗಳ ಮೃಗಗಳೆಲ್ಲವೂ ಮಲಗುವವು; ಬಕಪಕ್ಷಿಯೂ ಮುಳ್ಳು ಹಂದಿಯೂ ಅದರ ಮೇಲಿನ ಅವುಗಳ ಹಾಸುಗಳಲ್ಲಿ ಇಳುಕೊಳ್ಳುವವು; ಕಿಟಕಿಗಳಲ್ಲಿ ಹಾಡುವ ಶಬ್ದವಿರುವದು; ಹೊಸ್ತಿಲಗಳಲ್ಲಿ ಹಾಳು ಇರುವದು; ದೇವದಾ ರಿನ ಕೆಲಸವನ್ನು ಬೈಲುಮಾಡುವನು.ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.
ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.
ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.