ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ನ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು.
Cross references
ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.
ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.
ಆದದರಿಂದ ಸೈನ್ಯಗಳ ದೇವರಾದ ಕರ್ತನು ಇಂತೆ ನ್ನುತ್ತಾನೆ--ಚೀಯೋನಿನಲ್ಲಿ ವಾಸಿಸುವ ಓ ನನ್ನ ಜನರೇ, ಐಗುಪ್ತ್ಯರಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
ಇನ್ನು ಸ್ವಲ್ಪ ಕಾಲದಲ್ಲಿ, (ನಿಮ್ಮ ಮೇಲಿನ) ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾ ಗುವದು.
ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು.
ಜನರನ್ನು ಉಗ್ರಕೋಪದಿಂದ ಎಡೆಬಿಡದೆ ಹೊಡೆ ದು ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ
ಸಮುದ್ರವು ಭೋರ್ಗರೆಯುವಂತೆ ಭೋರ್ಗರೆ ಯುವ ಬಹು ಜನಗಳ ಸಮೂಹಕ್ಕೆ ಅಯ್ಯೋ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಾಂಗಗಳಿಗೆ ಅಯ್ಯೋ!
ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
ಆಗ ಅಶ್ಶೂರ್ಯನು ಕತ್ತಿಯಿಂದ ಬೀಳುವನು, ಬಲಿಷ್ಟ ನಿಂದಲ್ಲ; ಅವನು ನುಂಗಲ್ಪಡುವನು, ಹೀನನ ಕತ್ತಿ ಯಿಂದಲ್ಲ; ಅವನು ಕತ್ತಿಯ ಕಡೆಯಿಂದ ಓಡುವನು, ಅವನ ಯೌವನಸ್ಥರು ಸೋಲಿಸಲ್ಪಡುವರು.ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
ಅಲ್ಲಿ ಅಶ್ಶೂರ್ಯ ಮತ್ತು ಅದರ ಎಲ್ಲಾ ಗುಂಪು ಇರುವದು; ಸುತ್ತಲೂ ಅದರ ಸಮಾಧಿಗಳಿರುವವು; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ.
ನೀನೂ ನಿನ್ನ ಎಲ್ಲಾ ದಳಗಳೂ ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ; ಎಲ್ಲಾ ತರಹದ ಮಾಂಸ ತಿನ್ನುವ ಪಕ್ಷಿಗಳಿಗೂ ಬಯಲಿನ ಮೃಗಗಳಿಗೂ ತಿನ್ನುವಂತೆ ನಾನು ನಿನ್ನನ್ನು ಕೊಡುವೆನು.
ಇದಲ್ಲದೆ ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದಾಗ ಈತನೇ ಸಮಾಧಾನವಾಗಿರುವನು; ನಮ್ಮ ಅರಮನೆಗಳಲ್ಲಿ ಅವನು ತುಳಿಯುವಾಗ ನಾವು ಆತನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಮುಖ್ಯ ಮನುಷ್ಯರನ್ನೂ ಎಬ್ಬಿಸುವೆವು.
ಆದರೆ ನಾನು ಈಗ ನಿನ್ನ ಮೇಲಿಂದ ಆತನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಡುವೆನು.
ಅವನು ಸಮುದ್ರವನ್ನು ಬಾಧೆಯಿಂದ ದಾಟುವನು; ಸಮುದ್ರದಲ್ಲಿ ತೆರೆಗಳನ್ನು ಬಡಿಯು ವನು; ನದಿಯ ಅಗಾಧಗಳೆಲ್ಲಾ ಒಣಗುವವು; ಅಶ್ಯೂರಿನ ಗರ್ವವು ತಗ್ಗಿಸಲ್ಪಡುವದು; ಐಗುಪ್ತದ ಮುದ್ರೆಕೋಲು ಹೋಗಿಬಿಡುವದು.ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.