Home Bibles ಯೆಶಾಯ 14:27 · ಕನ್ನಡ ಬೈಬಲ್
ಯೆಶಾಯ 14:27 · ಕನ್ನಡ ಬೈಬಲ್

ಸೈನ್ಯಗಳ ಕರ್ತನುಉದ್ದೇಶಿಸಿ ದ್ದಾನೆ; ಅದನ್ನು ಯಾರು ವ್ಯರ್ಥಪಡಿಸುವರು. ಆತನ ಕೈಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು ಎಂಬದೇ.

Cross references

2 ದಿನವೃತ್ತಾಂತ 20:6

ಓ ಕರ್ತನೇ, ಪರಲೋಕದಲ್ಲಿರುವ ದೇವರು ನೀನಲ್ಲವೋ? ನೀನು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀಯಲ್ಲವೋ? ಯಾವನೂ ನಿನ್ನನ್ನು ಎದುರಿಸಕೂಡದ ಹಾಗೆ ನಿನ್ನ ಕೈಯಲ್ಲಿ ಶಕ್ತಿಯೂ ಪರಾಕ್ರಮವೂ ಇಲ್ಲವೋ?

ಯೋಬ 9:12

ಇಗೋ, ಆತನು ತೆಗೆದುಕೊಂಡು ಹೋಗುತ್ತಾನೆ. ಆತನಿಗೆ ಅಡ್ಡಿಮಾಡುವವರು ಯಾರು? ಆತನನ್ನು--ನೀನು ಏನು ಮಾಡುತ್ತೀ ಎಂದು ಕೇಳುವ ವರಾರು?

ಯೋಬ 11:10

ಆತನು ಅದನ್ನು ಕಡಿಯುವದಾದರೆ ಇಲ್ಲವೆ ಮುಚ್ಚುವದಾದರೆ ಅಥವಾ ಒಟ್ಟು ಗೂಡಿಸುವದಾದರೆ ಆತನನ್ನು ತಡೆಯುವವರು ಯಾರಿದ್ದಾರೆ?

ಯೋಬ 23:13

ಆದರೆ ಆತನು ಒಂದೇ ಮನಸ್ಸುಳ್ಳವನು, ಆತ ನನ್ನು ತಿರುಗಿಸುವವನ್ಯಾರು? ತನ್ನ ಪ್ರಾಣವು ಅಪೇ ಕ್ಷಿಸುವ ಪ್ರಕಾರವೇ ಮಾಡುತ್ತಾನೆ.

ಯೋಬ 40:8

ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ?

ಯೋಬ 42:2

ನಿನಗೆ ಎಲ್ಲಾ ಸಾಧ್ಯವಾಗಿದೆ; ನಿನಗೆ ಯಾವ ಆಲೋಚನೆಯೂ ತಡೆಯಲ್ಪಡುವದಿಲ್ಲವೆಂದು ತಿಳಿದಿದ್ದೇನೆ.

ಕೀರ್ತನೆಗಳು 33:11

ಕರ್ತನ ಆಲೋಚನೆಯು ಎಂದೆಂದಿಗೂ ಆತನ ಹೃದಯದ ಆಲೋಚನೆಗಳು ತಲತಲಾಂತ ರಕ್ಕೂ ನಿಲ್ಲುವವು.

ಸಾಮೇತಿಗಳು 19:21

ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.

ಸಾಮೇತಿಗಳು 21:30

ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.

ಯೆಶಾಯ 8:10

ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.

ಯೆಶಾಯ 9:12

ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿ ಬಿಡುವರು; ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.

ಯೆಶಾಯ 23:9

ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇ ಕೆಂತಲೂ ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವ ಮಾನಪಡಿಸಬೇಕೆಂತಲೂ ಸೈನ್ಯಗಳ ಕರ್ತನೇ, ಹೀಗೆ ಸಂಕಲ್ಪಿಸಿದ್ದಾನೆ.

ಯೆಶಾಯ 43:13

ಹೌದು, ಅಂದಿನಿಂದಲೇ ನಾನಿದ್ದೇನೆ; ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?

ಯೆಶಾಯ 46:11

ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.

ಯೆರೆಮಿಯ 4:28

ಇದರ ನಿಮಿತ್ತ ಭೂಮಿಯು ದುಃಖಿಸುವದು; ಮೇಲಿರುವ ಆಕಾಶವು ಕಪ್ಪಾಗುವದು; ನಾನು ಅದನ್ನು ಹೇಳಿ ನಿಶ್ಚಯಿಸಿದ್ದೇನೆ; ಮಾನಸಾಂತರಪಡುವದಿಲ್ಲ; ಇಲ್ಲವೆ ಅದರಿಂದ ಹಿಂತಿರುಗುವದಿಲ್ಲ;

ದಾನಿಯೇಲ 4:31

ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಶಬ್ದವು ಉಂಟಾಯಿತು; ಏನಂದರೆ--ಓ ಅರಸನಾದ ನೆಬೂಕದ್ನೆ ಚ್ಚರನೇ, ನಿನಗೆ ಹೇಳುವದೇನಂದರೆ, ನಿನ್ನ ರಾಜ್ಯವು ನಿನ್ನನ್ನು ಬಿಟ್ಟು ಹೋಯಿತು.

ರೋಮಾಪುರದವರಿಗೆ 8:28

ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.

ರೋಮಾಪುರದವರಿಗೆ 8:31

ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?

Interlinear

Choose Theme