ಕರ್ತನು ನಿಮ್ಮ ಸಂಕಟದಿಂದಲೂ ಕಳವಳದಿಂದ ಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಸಾಮತಿಯನ್ನು (ಪದ್ಯವನ್ನು) ನೀವು ಹೀಗೆ ಎತ್ತಿ ಹೇಳಬೇಕು.
Cross references
ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು.
ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು.
ಈಗ ನಮ್ಮ ದೇವರು, ನಮ್ಮ ಕಣ್ಣುಗಳು ಕಳೆಗೊಳ್ಳುವ ಹಾಗೆಯೂ ನಮ್ಮ ದಾಸತ್ವದಲ್ಲಿ ನಮ್ಮನ್ನು ಸ್ವಲ್ಪ ಉಜ್ಜೀವಿಸುವ ಹಾಗೆಯೂ ನಮಗಾಗಿ ಜನಶೇಷವನ್ನು ಉಳಿಸಿ ತನ್ನ ಪರಿಶುದ್ಧ ಸ್ಥಾನದಲ್ಲಿ ನಮಗೆ ಮೊಳೆಯನ್ನು ಕೊಡುವದಕ್ಕೂ ಸ್ವಲ್ಪ ಹೊತ್ತು ನಮ್ಮ ದೇವರಾಗಿರುವ ಕರ್ತನಿಂದ ನಮಗೆ ದಯವು ದೊರಕಿತು.
ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.
ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ ಭದ್ರವಾದ ಸ್ಥಾನಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.
ಇಗೋ, ನಾನು ಅವರನ್ನು ಉತ್ತರ ದೇಶ ದಿಂದ ಬರಮಾಡಿ ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ; ಅವರಲ್ಲಿ ಕುರುಡರೂ ಕುಂಟರೂ ಗರ್ಭಿಣಿಯಾದವರೂ ದಿನತುಂಬಿದ ಗರ್ಭಿಣಿಯರ ಸಹಿತವಾಗಿ ಇರುವರು; ದೊಡ್ಡ ಗುಂಪಾಗಿ ಇಲ್ಲಿಗೆ ಹಿಂತಿರುಗಿ ಬರುವರು.
ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು.
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ.
ಇಸ್ರಾಯೇಲ್ ವಂಶದವರಿಗೆ ಚುಚ್ಚುವ ದತ್ತೂರಿ ಸುತ್ತಲೂ ಹೀನೈಸುವ ನೋಯಿಸುವ ಮುಳ್ಳು ಇನ್ನಿರದು; ನಾನೇ ದೇವರಾದ ಕರ್ತನೆಂದು ಅವರಿಗೆ ತಿಳಿಯುವದು.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಚೀಯೋನಿನ ವಿಷಯವಾಗಿ ಅತಿ ರೋಷಗೊಂಡಿದ್ದೆನು; ಅತಿ ಉಗ್ರದಿಂದ ಅದರ ವಿಷಯದಲ್ಲಿ ರೋಷವುಳ್ಳವನಾಗಿದ್ದೆನು.
ನಾನು ಅವರನ್ನು ತರುವೆನು; ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು; ಅವರು ನನ್ನ ಜನರಾಗಿ ರುವರು; ನಾನು ಸತ್ಯದಲ್ಲಿಯೂ ನೀತಿಯಲ್ಲಿಯೂ ಅವರ ದೇವರಾಗಿರುವೆನು.
ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.