ದೀನರ ಚೊಚ್ಚಲು ಮಕ್ಕಳು ಉಣ್ಣುವರು, ದಿಕ್ಕಿಲ್ಲದವರು ನಿರ್ಭಯವಾಗಿ ಮಲಗಿಕೊಳ್ಳುವರು; ನಿನ್ನ ಸಂತಾನವನ್ನು ಕ್ಷಾಮದಿಂದ ಸಾಯಿಸುವೆನು. ನಿನ್ನಲ್ಲಿ ಉಳಿದವರನ್ನು ಅವನು ಹತ ಮಾಡುವನು.
Cross references
ಅವನ ಚರ್ಮದ ಬಲವನ್ನು ತಿನ್ನುವನು; ಮರಣದ ಚೊಚ್ಟಲ ಮಗನು ಅವನ ಬಲವನ್ನು ತಿನ್ನುವನು.
ನೀವು ನನ್ನ ಪ್ರಜೆಯನ್ನು ಹೊಡೆದು ಚೂರು ಗಳನ್ನಾಗಿ ಮಾಡಿ ಬಡವರ ಮುಖಗಳನ್ನು ಹಿಂಡು ವದರ ಅರ್ಥವೇನು ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
ಆಗ ಕುರಿಮರಿಗಳು ತಮಗೆ ಮನಸ್ಸು ಬಂದ ಹಾಗೆ ಮೇಯುವವು, ಕೊಬ್ಬಿದವರ ಹಾಳಾದವುಗಳನ್ನು ಅನ್ಯರು ತಿನ್ನುವರು.
ಆ ದಿನದಲ್ಲಿ ಮನುಷ್ಯನು ಒಂದು ಕಡಸನ್ನು ಮತ್ತು ಎರಡು ಕುರಿಗಳನ್ನು ಸಾಕುವನು.
ಅವರು ಘೋರ ಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯು ವರು; ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜ ನನ್ನೂ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು.
ಅವನು ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು (ತಿಂದರೂ) ಹಸಿದೇ ಇರುವನು; ಅವನು ಎಡಗಡೆ ಯಲ್ಲಿರುವದನ್ನು ತಿಂದರೂ ಅವು ಅವನನ್ನು ತೃಪ್ತಿ ಪಡಿಸಲಾರವು. ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುವನು.ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
ಆಗ ನೀವು ಹೊಲದಲ್ಲಿ ಬೀಜ ಬಿತ್ತುವದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸು ವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರ ವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಸ್ಥಳದಲ್ಲಿ ಮೇಯುವವು.
ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನು ಎರಡನೇ ವರ್ಷದಲ್ಲಿ ಆದರಿಂದ ಮೊಳೆತದ್ದನ್ನು ತಿನ್ನುವಿರಿ. ಮೂರನೇ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ; ದ್ರಾಕ್ಷೇ ತೋಟವನ್ನು ನೆಟ್ಟು ಅವುಗಳ ಫಲವನ್ನು ತಿನ್ನುವದೇ ನಿಮಗೆ ಗುರುತಾಗಿ ರುವದು.
ಈ ಎರಡು ಸಂಗತಿ ಗಳು ನಿನಗೆ ಸಂಭವಿಸಿವೆ; ನಿನಗೋಸ್ಕರ ಚಿಂತಿಸು ವವರು ಯಾರಿದ್ದಾರೆ? ನಾಶನವೋ ಸಂಹಾರವೋ ಕ್ಷಾಮವೋ ಕತ್ತಿಯೋ ನಾನು ಯಾರಿಂದ ನಿನ್ನನ್ನು ಆಧರಿಸಲಿ?
ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ;
ಮೋವಾಬಿಗೆ ವಿರೋಧವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ ನೆಬೋ ಸೂರೆಯಾಯಿತು; ಕಿರ್ಯಾತಯಿಮು ನಾಚಿಕೆಹೊಂದಿ ಹಿಡಿಯಲ್ಪಟ್ಟಿತು; ಮಿಸ್ಗಾಬ್ ನಾಚಿಕೆಹೊಂದಿ ಹೆದರಿಕೊಂಡಿತು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ನಡಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಕೆಡಿಸಿದರು.
ಹೌದು, ಓ ತೂರೇ, ಚೀದೋನೇ, ಪಾಲೆಸ್ತಿನದ ಎಲ್ಲಾ ಪ್ರಾಂತ್ಯಗಳೇ, ನನ್ನ ಕೂಡ ನಿಮಗೇನು? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ನನಗೆ ಸಲ್ಲಿಸಿದರೆ ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
ಕರ್ತನು ಹೀಗೆ ಹೇಳುತ್ತಾನೆ--ಗಾಜದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅದರ ದಂಡನೆಯ ಕಡೆಯಿಂದ ತಿರುಗಿಸಿಬಿಡುವದಿಲ್ಲ; ಅವ ರನ್ನು ಸೆರೆಗೆ ಒಪ್ಪಿಸುವದಕ್ಕಾಗಿ ಎದೋಮಿಗೆ ಎಲ್ಲಾ ಸೆರೆಯವರನ್ನು ಕರೆತಂದರು.
ಗಾಜವು ಕೈಬಿಡಲ್ಪಡುವದು, ಅಷ್ಕೆಲೋನ್ ಹಾಳಾ ಗುವದು, ಅಷ್ಡೋದನ್ನು ಮಧ್ಯಾಹ್ನದಲ್ಲಿ ಹೊರಡಿಸು ವರು, ಎಕ್ರೋನ್ ಕೀಳಲ್ಪಡುವದು.
ಅಷ್ಕಲೋನು ನೋಡಿ ಭಯಪಡುವದು; ಗಾಜ ಸಹ ಅದನ್ನು ನೋಡಿ ಬಹಳವಾಗಿ ವೇದನೆಪಡುವದು, ಎಕ್ರೋನು ಸಹ; ಅದರ ನಿರೀಕ್ಷೆಯು ಅದನ್ನು ನಾಚಿಕೆ ಪಡಿಸಿತು; ಗಾಜ ದೊಳಗಿಂದ ಅರಸನು ನಾಶವಾಗುವನು; ಅಷ್ಕೆಲೋನು ನಿವಾಸವಿಲ್ಲದೆ ಇರುವದು.