ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಕರ್ತನು ಮುರಿದುಬಿಟ್ಟಿದ್ದಾನೆ. ಯಾವನೂ ಅಡ್ಡಿ ಮಾಡನು.
Cross references
ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
ದೇವರು ತನ್ನ ಕೋಪವನ್ನು ಹಿಂತೆಗೆಯ ದಿದ್ದರೆ ಸೊಕ್ಕಿನ ಸಹಾಯಕರು ಆತನ ಕೆಳಗೆ ಬೊಗ್ಗಿ ಕೊಳ್ಳುತ್ತಾರೆ.
ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ ಬಡವರಾದ ಜನರನ್ನು ಆಳುವ ದುಷ್ಟನು ಇರುತ್ತಾನೆ.
ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು.
ಅದು ಅಟ್ಟಿದ ಜಿಂಕೆಯಂತೆಯೂ ಯಾರೂ ಕೂಡಿ ಸದ ಕುರಿಗಳಂತೆಯೂ ಇರುವದು. ಅವರಲ್ಲಿ ಪ್ರತಿಯೊ ಬ್ಬನೂ ತನ್ನ ಜನರ ಕಡೆಗೆ ತಿರುಗಿಕೊಳ್ಳುವನು ಪ್ರತಿಯೊ ಬ್ಬನೂ ತನ್ನ ಸ್ವದೇಶಕ್ಕೆ ಓಡಿಹೋಗುವನು.
ಸಮುದ್ರದ ಅಡವಿಯ ವಿಷಯವಾದ ದೈವೋಕ್ತಿ ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿಹೋಗುವಂತೆ ಅದು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತದೆ.
ನಿನಗೆ ಅಯ್ಯೊ ಸೂರೆಯಾಗದಿದ್ದರೂ ನೀನು ಸೂರೆಮಾಡಿದಿ, ನಿನಗೆ ದ್ರೋಹ ಮಾಡದಿದ್ದರೂ ನೀನು ದ್ರೋಹ ಮಾಡಿದಿ, ನೀನು ಸೂರೆ ಮಾಡುವದನ್ನು ಮುಗಿಸಿದಾಗ ನೀನು ಸೂರೆ ಯಾಗುವಿ, ದ್ರೋಹ ಮಾಡುವುದನ್ನು ಬಿಟ್ಟ ಮೇಲೆ ನಿನಗೂ ದ್ರೋಹ ಮಾಡುವರು.
ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
ಬಾಬೆಲಿನ ಕುಮಾರ್ತೆಯಾದ ಓ ಕನ್ಯಾ ಸ್ತ್ರೀಯೇ, ಕೆಳಕ್ಕೆ ಇಳಿದು ಬಂದು ದೂಳಿ ನಲ್ಲಿ ಕುಳಿತುಕೋ, ಓ ಕಸ್ದೀಯರ ಕುಮಾರಿಯೇ ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಯಾಕಂದರೆ ಇನ್ನು ಮೇಲೆ ನೀನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯಲ್ಪಡುವದಿಲ್ಲ.
ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು.
ಎದೋಮು ಸಹ ಹಾಳಾಗುವದು; ಅದರ ಬಳಿಯಲ್ಲಿ ಹಾದು ಹೋಗುವವರೆಲ್ಲರೂ ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
ಪಟ್ಟಣವು ಒಂದು ಕಡೆಯಲ್ಲಿ ಹಿಡಿಯಲ್ಪಟ್ಟಿದೆ ಎಂದೂ ದಾಟುವ ಸ್ಥಳಗಳು ವಶವಾದವೆಂದೂ ಬಿದಿರುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದೂ ಯುದ್ಧಸ್ಥರು ಗಾಬರಿ ಪಟ್ಟರೆಂದೂ
ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
ಆ ಮೇಲೆ ನಾಲ್ಕನೆಯ ಮೃಗವು ಉಳಿದವು ಗಳಿಗಿಂತ ವ್ಯತ್ಯಾಸವಾಗಿಯೂ ಅತಿ ಭಯಂಕರವಾ ಗಿಯೂ ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ ಹಿತ್ತಾಳೆಯ ಉಗುರುಗಳುಳ್ಳದ್ದಾಗಿಯೂ ತುಂಡು ತುಂಡು ಮಾಡಿ ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥಾದ್ದೂ ಆಗಿದೆ.
ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?
ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ.
ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.
ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.