ನಿವ್ರೆಾಮ್ ನೀರು ಹಾಳಾಯಿತು; ಹುಲ್ಲು ಬಾಡಿಹೋಗಿದೆ, ಹಸಿಹುಲ್ಲು ಮುಗಿಯಿತು, ಅಲ್ಲಿ ಹಸಿರಾದದ್ದು ಇಲ್ಲವೇ ಇಲ್ಲ.
Cross references
ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ
ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು.
ತಗ್ಗಿನಲ್ಲಿರುವ ಬೇತ್ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ್; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು.
ಆದಕಾರಣ ಸಿಬ್ಮದ ದ್ರಾಕ್ಷಾ ಲತೆಯ ನಿಮಿತ್ತ ಯಜ್ಜೇರಿನೊಂದಿಗೆ ಅಳುವೆನು; ಓ ಹೆಷ್ಬೋನೇ, ಎಲೆಯಾಲೇ, ನಿನ್ನನ್ನು ನನ್ನ ಕಣ್ಣೀರಿ ನಿಂದ ತೋಯಿಸುವೆನು; ಬಿದ್ದುಹೋದ ನಿನ್ನ ಬೇಸಿ ಗೆಯ ಫಲಗಳಿಗೂ ಬೆಳೆಗಳಿಗೂ ಆರ್ಭಟಿಸುವರು.
ಇದಲ್ಲದೆ ಸಮುದ್ರದ ಕಡೆಯಿಂದ ನೀರು ಬತ್ತಿ ಹೋಗುವದು; ನದಿಗಳು ಇಂಗಿ ಒಣಗುವವು.
ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆವಿಾಯನಿಗೆ ಕರ್ತ ನಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು ಏನಂದರೆ--
ಹೊಲವು ಹಾಳಾಗಿದೆ; ಭೂಮಿಯು ಗೋಳಾಡುತ್ತದೆ; ಧಾನ್ಯವು ಹಾಳಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ಬಾಡಿಹೋಗಿದೆ.
ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ
ಮೊದಲನೆಯ ದೂತನು ಊದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂಮಿಗೆ ಸುರಿಸಲ್ಪಟ್ಟವು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು.