ಮೋವಾಬೇ, ನನ್ನಿಂದ ತಳ್ಳಿಬಿಟ್ಟವರು ನಿನ್ನೊಂದಿಗೆ ವಾಸಿಸಲಿ; ಹಾಳುಮಾಡುವವರ ಮುಖಗಳಿಂದ ಅವ ರಿಗೆ ಮರೆಯಾಗಿರು: ಹಿಂಸಿಸುವದು ಮುಗಿಯುತ್ತಾ ಬಂತು, ಸೂರೆಮಾಡುವದು ನಿಲ್ಲುವದು. ಪೀಡಿಸು ವವರು ದೇಶದಿಂದ ದಹಿಸಲ್ಪಡುವರು.
Cross references
ತನ್ನ ಯಜಮಾನನನ್ನು ಬಿಟ್ಟು ನಿನ್ನ ಬಳಿಗೆ ತಪ್ಪಿಸಿ ಕೊಂಡು ಬಂದ ದಾಸನನ್ನು ತನ್ನ ಯಜಮಾನನಿಗೆ ಒಪ್ಪಿಸಬಾರದು.
ನಿನ್ನ ಸಹೋದರರಲ್ಲಿಯಾಗಲಿ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳಲ್ಲಿ ಇರುವ ಪರರಲ್ಲಿಯಾಗಲಿ ಕೊರತೆಯುಳ್ಳ ಬಡಕೂಲಿಯವನನ್ನು ಬಾಧಿಸಬಾರದು.
ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
ಹೀಗೆ ಹಿಂಸಕನು ಕೊನೆ ಗೊಂಡನು, ಬಂಗಾರದ ಪಟ್ಟಣವು ಸುಮ್ಮನೆ ಇದೆ.
ನಿವ್ರೆಾಮ್ ನೀರು ಹಾಳಾಯಿತು; ಹುಲ್ಲು ಬಾಡಿಹೋಗಿದೆ, ಹಸಿಹುಲ್ಲು ಮುಗಿಯಿತು, ಅಲ್ಲಿ ಹಸಿರಾದದ್ದು ಇಲ್ಲವೇ ಇಲ್ಲ.
ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.
ನಿನಗೆ ಅಯ್ಯೊ ಸೂರೆಯಾಗದಿದ್ದರೂ ನೀನು ಸೂರೆಮಾಡಿದಿ, ನಿನಗೆ ದ್ರೋಹ ಮಾಡದಿದ್ದರೂ ನೀನು ದ್ರೋಹ ಮಾಡಿದಿ, ನೀನು ಸೂರೆ ಮಾಡುವದನ್ನು ಮುಗಿಸಿದಾಗ ನೀನು ಸೂರೆ ಯಾಗುವಿ, ದ್ರೋಹ ಮಾಡುವುದನ್ನು ಬಿಟ್ಟ ಮೇಲೆ ನಿನಗೂ ದ್ರೋಹ ಮಾಡುವರು.
ಆಕಾಶವನ್ನು ಹಾಸಿ, ಭೂಮಿಗೆ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟು ಮಾಡಿದ ಕರ್ತನನ್ನು ನೀನು ಮರೆತುಬಿಟ್ಟು ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶ ಪಡಿಸುವನೋ ಎಂಬಂತೆ ಅಂಜಿಕೊಂಡಿದ್ದಿಯಲ್ಲಾ? ಮತ್ತು ಆ ಹಿಂಸಕನ ಉಗ್ರವು ಎಲ್ಲಿ?
ಅವರು ಅವನನ್ನು ಸೆರೆಯಾಗಿ ಒಯ್ದ ಸ್ಥಳದ ಲ್ಲಿಯೇ ಸಾಯುವನು; ಈ ದೇಶವನ್ನು ಇನ್ನು ನೋಡು ವದೇ ಇಲ್ಲ;
ದೇದಾನಿನ ನಿವಾಸಿಗಳೇ, ಓಡಿ ಹೋಗಿರಿ, ತಿರುಗಿಕೊಳ್ಳಿರಿ, ಆಳವಾದ ಸ್ಥಳದಲ್ಲಿ ವಾಸಮಾಡಿರಿ. ಏಸಾವಿನ ಆಪತ್ತನ್ನೂ ನಾನು ಅವನನ್ನು ವಿಚಾರಿಸುವ ಕಾಲವನ್ನು ಅವನ ಮೇಲೆ ಬರಮಾಡು ತ್ತೇನೆ.
ಸೊದೋಮ್ ಗೊಮೋರ ಅವುಗಳ ಸವಿಾಪ ದಲ್ಲಿದ್ದ ಪಟ್ಟಣಗಳೂ ಕೆಡವಲ್ಪಟ್ಟಾಗ ಹಾಗೆಯೇ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ, ಅದರಲ್ಲಿ ಯಾವ ಮನುಷ್ಯನ ಪುತ್ರನಾದರೂ ತಂಗುವದಿಲ್ಲವೆಂದು ಕರ್ತನು ಅನ್ನುತ್ತಾನೆ.
ಇದಲ್ಲದೆ ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ ಸೈನ್ಯದ ನಿಮಿತ್ತವೂ ನನ್ನ ಮನೆಯ ಹತ್ತಿರ ಪಾಳೆಯಮಾಡುತ್ತೇನೆ; ಇನ್ನು ಮೇಲೆ ಉಪದ್ರ ಕೊಡುವವನು ಅವರ ಮೇಲೆ ಹಾದು ಹೋಗುವದಿಲ್ಲ; ಯಾಕಂದರೆ ಈಗ ನನ್ನ ಕಣ್ಣುಗಳಿಂದ ನೋಡಿದ್ದೇನೆ.
ಅವರು ಯುದ್ಧ ದಲ್ಲಿ ಶತ್ರುವನ್ನು ಬೀದಿಗಳ ಕೆಸರಿನಲ್ಲಿ ತುಳಿಯುವ ಶೂರರ ಹಾಗಿರುವರು; ಕರ್ತನು ಅವರ ಸಂಗಡ ಇರುವದರಿಂದ ಯುದ್ಧಮಾಡುವರು; ಕುದುರೆಗಳ ಮೇಲೆ ಸವಾರಿ ಮಾಡುವವರನ್ನು ನಾಚಿಕೆಪಡಿಸುವರು.
ದುಷ್ಟರನ್ನು ತುಳಿದುಬಿಡುವಿರಿ; ಯಾಕಂದರೆ ನಾನು ಕಾರ್ಯ ಸಾಧಿಸುವ ದಿನದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.