ಹೆಷ್ಬೋನಿನ ಹೊಲ ಗಳೂ, ಸಿಬ್ಮದ ದ್ರಾಕ್ಷೆಯೂ ನಿಸ್ಸಾರವಾಗಿವೆ; ಅನ್ಯ ಜನಗಳ ಪ್ರಭುಗಳು ಅದರ ಮುಖ್ಯವಾದ ಗಿಡಗಳನ್ನು ಮುರಿದುಹಾಕಿದ್ದಾರೆ; ಅವರು ಯಜ್ಜೇರಿನ ವರೆಗೂ ಬಂದರು; ಅಡವಿಯಲ್ಲಿ ಅವರು ಸಂಚರಿಸಿದರು. ಅವಳ ಕೊಂಬೆಗಳು ಚಾಚಲ್ಪಟ್ಟವು ಅವರು ಸಮುದ್ರದ ಮೇಲೆ ಹೋದರು.
Cross references
ಇದಲ್ಲದೆ ಮೋಶೆಯು ಯಗ್ಜೇರನ್ನು ಪಾಳತಿ ನೋಡುವದಕ್ಕೆ ಕಳುಹಿಸಿದನು; ಅವರು ಅವರ ಗ್ರಾಮ ಗಳನ್ನು ವಶಪಡಿಸಿಕೊಂಡು ಅಲ್ಲಿರುವ ಅಮೋರಿಯ ರನ್ನು ಹೊರಡಿಸಿಬಿಟ್ಟರು.
ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ
ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ,
ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು.
ಕಿರ್ಯಾತಯಿಮ್, ಸಿಬ್ಮಾ, ತಗ್ಗಿನ ಬೆಟ್ಟದಲ್ಲಿರುವ ಚೆರೆತ್ಶಹರ್,
ಯಗ್ಜೇರ್; ಗಿಲ್ಯಾದಿನ ಸಮಸ್ತ ಪಟ್ಟಣ ಗಳೂ ರಬ್ಬಾಕ್ಕೆ ಎದುರಾಗಿರುವ ಅರೋಯೆರಿನ ವರೆಗೂ ಇರುವ ಅಮ್ಮೋನಿನ ಮಕ್ಕಳ ಅರ್ಧ ದೇಶವು;
ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಅರ್ಪಣೆಗಳ ಹೊಲ ಗಳೂ ಇಲ್ಲದೆ ಹೋಗಲಿ. ಯಾಕಂದರೆ ಅಲ್ಲಿ ಪರಾ ಕ್ರಮಶಾಲಿಗಳ ಗುರಾಣಿಯೂ ಸೌಲನ ಗುರಾಣಿಯೂ ಅವಮಾನವಾಗಿ ಬಿದ್ದವು. ಸೌಲನು ಎಣ್ಣೆಯಿಂದ ಅಭಿಷೇಕಿಸಲ್ಪಡದವನ ಹಾಗಾದನು.
ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.
ಹೆಷ್ಬೋನ್ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ.
ಆದಕಾರಣ ಸಿಬ್ಮದ ದ್ರಾಕ್ಷಾ ಲತೆಯ ನಿಮಿತ್ತ ಯಜ್ಜೇರಿನೊಂದಿಗೆ ಅಳುವೆನು; ಓ ಹೆಷ್ಬೋನೇ, ಎಲೆಯಾಲೇ, ನಿನ್ನನ್ನು ನನ್ನ ಕಣ್ಣೀರಿ ನಿಂದ ತೋಯಿಸುವೆನು; ಬಿದ್ದುಹೋದ ನಿನ್ನ ಬೇಸಿ ಗೆಯ ಫಲಗಳಿಗೂ ಬೆಳೆಗಳಿಗೂ ಆರ್ಭಟಿಸುವರು.
ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ.
ಪ್ರವಾದಿಯಾದ ಯೆರೆವಿಾ ಯನು ಹೇಳಿದ್ದೇನಂದರೆ-- ಆಮೆನ್: ಕರ್ತನು ಹಾಗೆಯೇ ಮಾಡಲಿ: ನೀನು ಪ್ರವಾದಿಸಿದ ನಿನ್ನ ವಾಕ್ಯಗಳನ್ನು ಕರ್ತನು ನೆರವೇರಿಸಿ ಕರ್ತನ ಆಲಯದ ಪಾತ್ರೆಗಳನ್ನೂ ಸೆರೆಯವರೆಲ್ಲರನ್ನೂ ಬಾಬೆಲಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.
ಅವರ ಒಂಟೆಗಳು ಕೊಳ್ಳೆಯಾಗುವವು, ದನಗಳ ಸಮೂಹವು ಸುಲಿಗೆಯಾಗುವವು; ದನಗಳ ಸಮೂಹವು ಸುಲಿಗೆ ಯಾಗುವದು; ಕಟ್ಟ ಕಡೆಯ ಮೂಲೆಗಳಲ್ಲಿ ಇರುವ ವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಎಲ್ಲಾ ಕಡೆಯಿಂದ ಅವರನ್ನು ಸಂಹರಿಸುತ್ತೇನೆಂದು ಕರ್ತನು ಅನ್ನುತ್ತಾನೆ.