ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
Cross references
ಅವರು ಗಾಳಿಯ ಮುಂದೆ ಇರುವ ಹುಲ್ಲಿನ ಹಾಗೆಯೂ ಬಿರುಗಾಳಿಯು ಬಡ ಕೊಂಡು ಹೋಗುವ ಹೊಟ್ಟಿನ ಹಾಗೆಯೂ ಇದ್ದಾರೆ.
ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.
ಭಕ್ತಿಹೀನರು ಹಾಗಲ್ಲ, ಅವರು ಗಾಳಿ ಬಡು ಕೊಂಡು ಹೋಗುವ ಹೊಟ್ಟಿನ ಹಾಗೆ ಇದ್ದಾರೆ.
ನೀನು ಜನಾಂಗಗಳನ್ನು ಗದರಿಸಿ ದುಷ್ಟರನ್ನು ನಾಶ ಮಾಡಿದ್ದೀ; ಅವರ ಹೆಸರನ್ನು ಯುಗ ಯುಗಾಂತರ ಗಳ ವರೆಗೂ ಅಳಿಸಿ ಬಿಟ್ಟಿದ್ದೀ.
ಅವರು ಗಾಳಿಯ ಮುಂದಿನ ಹೊಟ್ಟಿನ ಹಾಗೆ ಆಗಲಿ; ಕರ್ತನ ದೂತನು ಅವರನ್ನು ಹಿಂದಟ್ಟಲಿ, ಸೆಲಾ.
ದೇವರು ಅದರ ಮಧ್ಯದಲ್ಲಿ ಇದ್ದಾನೆ; ಅದು ಕದಲದು; ದೇವರು ಹೊತ್ತಾರೆಯಲ್ಲಿ ಅದಕ್ಕೆ ಸಹಾಯ ಮಾಡುವನು.
ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರು ಸಹ ನಿನ್ನ ಗುರುತುಗಳಿಗೆ ಭಯಪಡುವರು. ಉದಯಾಸ್ತ ಮಾನ ಸಮಯಗಳನ್ನು ಉತ್ಸಾಹಧ್ವನಿಗೈಯುವಂತೆ ನೀನು ಮಾಡುತ್ತೀ.
ಓ ನನ್ನ ದೇವರೇ, ಅವರನ್ನು ಚಕ್ರದ ಹಾಗೆಯೂ ಗಾಳಿಯ ಮುಂದಿರುವ ಕಸದ ಹಾಗೆಯೂ ಮಾಡು.
ಕಾಡನ್ನು ಸುಡುವ ಬೆಂಕಿಯ ಹಾಗೆಯೂ ಬೆಟ್ಟಗಳನ್ನು ದಹಿಸುವ ಜ್ವಾಲೆಯ ಹಾಗೆಯೂ
ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.
ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.
ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ನ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು.
ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು.
ಅದೂ ಅಲ್ಲದೆ ನಿನ್ನ ಅನ್ಯರ ಗುಂಪು ಸೂಕ್ಷ್ಮ ವಾದ ದೂಳಿನಂತಾಗುವದು, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರು ವದು; ಹೌದು, ಅದು ಕ್ಷಣ ಮಾತ್ರದಲ್ಲಿ ಫಕ್ಕನೆ ಆಗುವದು.
ಆತನ ಶ್ವಾಸವು ತುಂಬಿ ತುಳುಕಿ ಕಂಠದ ವರೆಗೂ ಏರುವ ತೊರೆಯಂತಿದೆ; ಜನಾಂಗಗಳನ್ನು ಏನೂ ಉಳಿಸದ ಜಲ್ಲಡಿಯಿಂದ ಜಾಲಿಸುವದಕ್ಕೆ ಬರು ತ್ತಾನೆ; ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆ ಗಳಲ್ಲಿರುವದು.
ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
ಆಗ ಅಶ್ಶೂರ್ಯನು ಕತ್ತಿಯಿಂದ ಬೀಳುವನು, ಬಲಿಷ್ಟ ನಿಂದಲ್ಲ; ಅವನು ನುಂಗಲ್ಪಡುವನು, ಹೀನನ ಕತ್ತಿ ಯಿಂದಲ್ಲ; ಅವನು ಕತ್ತಿಯ ಕಡೆಯಿಂದ ಓಡುವನು, ಅವನ ಯೌವನಸ್ಥರು ಸೋಲಿಸಲ್ಪಡುವರು.ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
ನಿನಗೆ ಅಯ್ಯೊ ಸೂರೆಯಾಗದಿದ್ದರೂ ನೀನು ಸೂರೆಮಾಡಿದಿ, ನಿನಗೆ ದ್ರೋಹ ಮಾಡದಿದ್ದರೂ ನೀನು ದ್ರೋಹ ಮಾಡಿದಿ, ನೀನು ಸೂರೆ ಮಾಡುವದನ್ನು ಮುಗಿಸಿದಾಗ ನೀನು ಸೂರೆ ಯಾಗುವಿ, ದ್ರೋಹ ಮಾಡುವುದನ್ನು ಬಿಟ್ಟ ಮೇಲೆ ನಿನಗೂ ದ್ರೋಹ ಮಾಡುವರು.
ಕೋಲಾಹಲದ ಶಬ್ದಕ್ಕೆ ಜನರು ಓಡಿಹೋಗುತ್ತಾರೆ, ನೀನು ಏಳುವಾಗ ರಾಜ್ಯಗಳು ಚದರಿಹೋಗುತ್ತವೆ.
ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನ್ ನಾಚಿಕೆಪಟ್ಟು ಕಡಿದು ಬೀಳುವದು. ಶಾರೋನ್ ಬೆಂಗಾ ಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಹಣ್ಣುಗಳನ್ನು ಉದುರಿಸಿಬಿಟ್ಟಿವೆ.
ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.
ಹೌದು, ಅವರು ನೆಡಲ್ಪಡುವದಿಲ್ಲ ಬಿತ್ತ ಲ್ಪಡುವದಿಲ್ಲ. ಹೌದು ಅವರ ಬುಡವು ಭೂಮಿ ಯಲ್ಲಿ ಬೇರೂರುವದಿಲ್ಲ. ಆತನು ಶ್ವಾಸವನ್ನು ಅವರ ಮೇಲೆ ಊದಲು ಒಣಗಿಹೋಗುವರು. ಬಿರು ಗಾಳಿಯು ಅವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವದು.
ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ.
ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
ಆದದರಿಂದ ಅವರು ಪ್ರಾತಃ ಕಾಲದ ಮೇಘದ ಹಾಗೆಯೂ ಬೇಗನೆ ಮಾಯ ವಾಗುವ ಇಬ್ಬನಿ ಹಾಗೆಯೂ ಸುಳಿಗಾಳಿಯು ನೆಲದಿಂದ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೂ ಚಿಮಿಣಿಗೆಯಿಂದ ಹೊರಡುವ ಹೊಗೆಯ ಹಾಗೆಯೂ ಇರುವರು.
ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.