Home Bibles ಯೆಶಾಯ 17:6 · ಕನ್ನಡ ಬೈಬಲ್
ಯೆಶಾಯ 17:6 · ಕನ್ನಡ ಬೈಬಲ್

ಆದರೂ ಎಣ್ಣೇ ಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿ ಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲು ಹಣ್ಣುಗಳು ಅದರಲ್ಲಿ ಉಳಿ ಯುವವು ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳುತ್ತಾನೆ.

Cross references

ದ್ವಿತೀಯೋಪದೇಶಕಾಂಡ 4:27

ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.

ನ್ಯಾಯಾಧಿಪತಿಗಳು 8:2

ಅವನು ಅವರಿಗೆನೀವು ಮಾಡಿದ್ದಕ್ಕೆ ಸಮಾನವಾಗಿ ನಾನೇನು ಮಾಡಿ ದೆನು? ಅಬೀಯೆಜೆರನ ದ್ರಾಕ್ಷೇ ಫಲ ಕೂಡಿಸುವ ದಕ್ಕಿಂತ ಎಫ್ರಾಯಾಮನ ದ್ರಾಕ್ಷೇ ಹಕ್ಕಲು ಉತ್ತಮ ವಲ್ಲವೇ?

1 ಅರಸುಗಳು 19:18

ಆದರೆ ಬಾಳನಿಗೆ ಬೊಗ್ಗದೆ ಇರುವ ಸಕಲ ಮೊಣ ಕಾಲುಗಳೂ ಅದನ್ನು ಮುದ್ದಿಡದ ಸಕಲ ಬಾಯಿಗಳೂ ಆಗಿರುವ ಏಳು ಸಾವಿರ ಮಂದಿಯನ್ನು ಇಸ್ರಾಯೇ ಲಿನಲ್ಲಿ ನನಗೋಸ್ಕರ ಉಳಿಸಿಕೊಂಡಿದ್ದೇನೆ ಅಂದನು.

ಯೆಶಾಯ 1:9

ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.

ಯೆಶಾಯ 10:22

ತನ್ನ ಜನರಾದ ಇಸ್ರಾಯೇಲ್ಯರು ಸಮುದ್ರದ ಮರಳಿನಂತೆ ಇದ್ದರೂ ಅವರಲ್ಲಿ ಉಳಿದವರು ಮಾತ್ರ ಹಿಂತಿರು ಗುವರು; ನಾಶವಾಗುವದಕ್ಕೆ ವಿಧಿಸಲ್ಪಟ್ಟದ್ದು ನೀತಿ ಯೊಂದಿಗೆ ತುಂಬಿ ತುಳುಕುವದು.

ಯೆಶಾಯ 24:13

ಎಣ್ಣೇ ಮರವನ್ನು ಬಡಿದ ಮೇಲೆಯೂ ದ್ರಾಕ್ಷೇ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವದು.

ಯೆಶಾಯ 27:12

ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.

ಯೆರೆಮಿಯ 4:27

ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ.

ಯೆಹೆಜ್ಕೇಲ 36:8

ಆದರೆ ಓ ಇಸ್ರಾಯೇಲ್‌ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹೊರಡಿಸಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವಿರಿ; ಅವರ ಬರುವಿಕೆಯು ಸವಿಾಪವಾಗಿದೆ.

ಯೆಹೆಜ್ಕೇಲ 37:19

ಇಗೋ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಎಫ್ರಾಯಾಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲ್ಯರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು ಎಂಬದು;

ಯೆಹೆಜ್ಕೇಲ 39:29

ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.

ಒಬದ್ಯ 1:5

ಕಳ್ಳರು ನಿನ್ನ ಬಳಿಗೆ ಬಂದಿದ್ದರೆ ಸುಲುಕೊಳ್ಳುವವರು ರಾತ್ರಿಯಲ್ಲಿ ಬಂದಿದ್ದರೆ ಎಷ್ಟೋ ಹಾಳಾಗುತ್ತಿದ್ದಿಯಲ್ಲಾ! ಅವರು ತಮಗೆ ಸಾಕಾಗುವಷ್ಟು ಕದ್ದುಕೊಳ್ಳುವರಲ್ಲವೋ? ದ್ರಾಕ್ಷೇಹಣ್ಣನ್ನು ಕೂಡಿಸುವ ವರು ನಿನ್ನ ಬಳಿಗೆ ಬಂದಿದ್ದರೆ ಅವರು ಕೆಲವು ದ್ರಾಕ್ಷೇ ಹಣ್ಣನ್ನು ಬಿಡುವರಲ್ಲವೋ?

ಮೀಕ 7:1

ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ.

ರೋಮಾಪುರದವರಿಗೆ 9:27

ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.

ರೋಮಾಪುರದವರಿಗೆ 11:4

ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.

ರೋಮಾಪುರದವರಿಗೆ 11:26

ಹೀಗೆ ಇಸ್ರಾಯೇಲ್‌ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.

Interlinear

Choose Theme