ಅವನು ತನ್ನ ಕೈಕೆಲಸ ವಾದ ಬಲಿಪೀಠಗಳನ್ನು ದೃಷ್ಟಿಸನು ತನ್ನ ಬೆರಳುಗಳು ಮಾಡಿದ್ದನೂಅಥವಾ ತೋಪುಗಳನ್ನೂ ವಿಗ್ರಹ ಗಳನ್ನೂ ನೋಡನು.
Cross references
ಆದರೆ ನೀವು ಅವರ ಯಜ್ಞ ವೇದಿಗಳನ್ನು ಹಾಳುಮಾಡಿ ವಿಗ್ರಹಗಳನ್ನು ಒಡೆದು (ಅಶೇರ) ವಿಗ್ರಹ ಸ್ತಂಭಗಳನ್ನು ಕಡಿದುಹಾಕಬೇಕು.
ಇದಲ್ಲದೆ ಅವನು ಉನ್ನತ ಸ್ಥಳಗಳನ್ನೂ ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಅವನ ಮುಂದೆ ಶಾಂತ ವಾಗಿತ್ತು.
ಇದೆಲ್ಲಾ ತೀರಿದ ತರುವಾಯ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲ್ಯರು ಯೆಹೂ ದದ ಪಟ್ಟಣಗಳಿಗೆ ಹೊರಟು ಹೋಗಿ ವಿಗ್ರಹಗಳನ್ನು ಮುರಿದು ತೋಪುಗಳನ್ನು ಕಡಿದು ಸಮಸ್ತ ಯೆಹೂದ ಬೆನ್ಯಾವಿಾನ್ ಎಫ್ರಾಯಾಮ್ ಮನಸ್ಸೆ ದೇಶಗಳಲ್ಲಿ ಅವುಗಳನ್ನೆಲ್ಲಾ ತೀರಿಸುವ ಪರ್ಯಂತರ ಉನ್ನತ ಸ್ಥಳ ಗಳನ್ನೂ ಬಲಿಪೀಠಗಳನ್ನೂ ಕೆಡವಿಹಾಕಿದರು. ಆಗ ಇಸ್ರಾಯೇಲ್ ಮಕ್ಕಳೆಲ್ಲರು ತಮ್ಮ ತಮ್ಮ ಸ್ವಾಸ್ತ್ಯಗ ಳಿಗೂ ತಮ್ಮ ತಮ್ಮ ಪಟ್ಟಣಗಳಿಗೂ ತಿರಿಗಿಹೋದರು.
ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯಸ್ತಂಭಗಳನ್ನು ಕಡಿದುಹಾಕಿ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿ ಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿ ಗಳ ಮೇಲೆ ಚೆಲ್ಲಿಸಿ
ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ ಎಫ್ರಾಯಾಮ್ ಸಿಮೆಯೋನ್ ಪಟ್ಟಣಗಳು ಮೊದಲು ಗೊಂಡು ನಫ್ತ್ತಾಲಿಯ ವರೆಗೂ ಸುತ್ತಲೂ ಮಾಡಿದರು.
ನೀವು ಇಷ್ಟ ಪಟ್ಟ ಏಲಾಮರಗಳ ನಿಮಿತ್ತ ನಾಚಿಕೊಳ್ಳುವರು, ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.
ಆತನು ವಿಗ್ರಹಗಳನ್ನು ಸಂಪೂರ್ಣ ವಾಗಿ ಇಲ್ಲದಂತೆ ಮಾಡಿಬಿಡುವನು.
ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ.
ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನು ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಕ್ಕೆ ತೊಲಗಿಹೋಗಿರಿ ಎಂದು ಹೊಲೆಯ ಬಟ್ಟೆಯಂತೆ ಬಿಸಾಡಿಬಿಡುವಿರಿ.
ಇಸ್ರಾಯೇಲ್ಯರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದ್ದೀರೋ ಆತನ ಕಡೆಗೆ ತಿರುಗಿ ಕೊಳ್ಳಿರಿ.
ಆಗ ಅದು ಮನುಷ್ಯರು ಉರಿಸು ವದಕ್ಕಾಗುವದು; ಅದರಿಂದ ಚಳಿಕಾಯಿಸಿಕೊಳ್ಳು ವನು, ಹೌದು, ಅದನ್ನು ಬೆಂಕಿ ಹಚ್ಚಿ ರೊಟ್ಟಿ ಸುಡು ವನು; ಹೌದು, ಅವನು ಒಂದು ದೇವರನ್ನು ಮಾಡಿ ಅದಕ್ಕೆ ನಮಸ್ಕರಿಸುವನು; ಅದರಲ್ಲಿ ಒಂದು ಕೆತ್ತಿದ ವಿಗ್ರಹವನ್ನು ಮಾಡಿ, ಅದಕ್ಕೆ ಅಡ್ಡಬಿಳುವನು. ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು;
ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.
ಇಸ್ರಾಯೇಲು ಬರಿದಾದ ದ್ರಾಕ್ಷೇಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿ ಸುತ್ತಾನೆ; ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಒಳ್ಳೆಯ ತನದ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿ ದ್ದಾನೆ.
ಎಫ್ರಾಯಾಮು ನಡುಗುತ್ತಾ ಮಾತನಾಡಿದಾಗ ಅವನು ತನ್ನನ್ನು ಇಸ್ರಾಯೇಲಿನಲ್ಲಿ ಹೆಚ್ಚಿಸಿಕೊಂಡನು; ಆದರೆ ಬಾಳನ ವಿಷಯದಲ್ಲಿ ಅವನು ಅಪರಾಧಿಯಾದ ಮೇಲೆ ಸತ್ತನು.
ಎಫ್ರಾಯಾಮೇ--ನಾನು ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನನ್ನು ಕೇಳಿದ್ದೇನೆ ಮತ್ತು ನಾನು ಅವನನ್ನು ದೃಷ್ಟಿಸಿದ್ದೇನೆ. ನಾನು ಹಸುರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಕಂಡುಕೊಂಡಿ ಎಂದು ಅಂದುಕೊಳ್ಳುವದು.ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
ನಿನ್ನ ಕೆತ್ತಿದ ವಿಗ್ರಹಗಳನ್ನೂ ನಿಂತಿರುವ ನಿನ್ನ ಪ್ರತಿಮೆಗಳನ್ನೂ ನಿನ್ನ ಮಧ್ಯದೊಳಗಿಂದ ಕಡಿದು ಬಿಡುವೆನು; ನೀನು ಇನ್ನು ಸ್ವಂತ ಕೈಕೆಲಸಗಳನ್ನು ಆರಾಧಿಸುವದಿಲ್ಲ.
ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.
ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ.