ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ.
Cross references
ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.
ಆಗ ಸೌಲನು--ಜನರ ಎಲ್ಲಾ ಮುಖ್ಯಸ್ಥರೇ, ಇಲ್ಲಿ ಬನ್ನಿರಿ; ಈಹೊತ್ತು ಈ ಪಾಪ ಯಾವದರಿಂದ ಉಂಟಾಯಿತೆಂದು ತಿಳುಕೊಂಡು ನೋಡಿರಿ.
ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ?
ನೋಫ್ ಮತ್ತು ತಪನೆಯ ಮಕ್ಕಳೂ ಸಹ ನಿನ್ನ ತಲೆಯ ಕಿರೀಟವನ್ನು ಮುರಿದುಬಿಟ್ಟಿದ್ದಾರೆ.
ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆವಿಾಯನ ಬಾಯಿಂದ ಬಂದ ಹಾಗೆ ಪುಸ್ತಕದಲ್ಲಿ ಬರೆದ ಮೇಲೆ ಯೆರೆವಿಾಯನು ಅವನಿಗೆ ಹೇಳಿದ ವಾಕ್ಯವೆನಂದರೆ,
ದೇವರಾದ ಕರ್ತನು ಹೀಗೆ ಹೇಳುತ್ತಾನೆ. ನಾನು ವಿಗ್ರಹಗಳನ್ನು ಹಾಳು ಮಾಡಿ ಬೊಂಬೆಗಳನ್ನು ನೋಫಿನಲ್ಲಿ ತೀರಿಸಿಬಿಡುವೆನು; ಐಗುಪ್ತದೇಶದ ಪ್ರಭುವು ಇನ್ನು ಇರುವದಿಲ್ಲ, ನಾನು ಐಗುಪ್ತ ದೇಶದಲ್ಲಿ ಭಯವನ್ನು ಉಂಟುಮಾಡುತ್ತೇನೆ.
ನಾನು ಐಗುಪ್ತಕ್ಕೆ ಕಿಚ್ಚನ್ನು ಹೆಚ್ಚಿಸಲು ಸೀನ್ ಪ್ರಾಣಸಂಕಟಪಡುವದು, ನೋಪುರವು ಭಾಗಭಾಗ ವಾಗಿ ಸೀಳಲ್ಪಡುವದು, ನೋಫಿನ ಮೇಲೆ ಪ್ರತಿ ದಿನವೂ ಇಕ್ಕಟ್ಟು ಇರುವದು.
ಅವರು ಹಾಳಾದ ದೇಶವನ್ನು ಬಿಟ್ಟು ಹೋಗುವರು; ಐಗುಪ್ತವು ಅವರನ್ನು ಕೂಡಿಸುವದು, ಮೋಫ್ ಪಟ್ಟಣವು ಅವರನ್ನು ಹೂಣುವದು; ಅಪೇಕ್ಷಿ ಸಲ್ಪಟ್ಟ ಅವರ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು. ತುರುಚಿಯ ಗಿಡಗಳು ಅವರನ್ನು ಆವರಿಸಿಕೊಂಡಿವೆ; ಮುಳ್ಳುಗಳು ಅವರ ಗುಡಾರಗಳಲ್ಲಿ ಇರುವವು.
ಆತ ನಿಂದ ಮೂಲೆಗಲ್ಲೂ ಆತನಿಂದ ಮೊಳೆಯೂ ಆತನಿಂದ ಯುದ್ಧದ ಬಿಲ್ಲೂ ಆತನಿಂದ ಹಿಂಸಿಸುವವರೆಲ್ಲರೂ ಕೂಡಿಕೊಂಡು ಹೊರಡುತ್ತಾರೆ.
ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;
ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.