ಆ ದಿವಸದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ಒಂದು ರಾಜಮಾರ್ಗವಿರುವದು. ಅಶ್ಶೂ ರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರ್ಯಕ್ಕೂ ಹೋಗಿ ಬರುವರು ಮತ್ತು ಐಗುಪ್ತ್ಯರು ಅಶ್ಶೂರ್ಯರೊಂದಿಗೆ (ಕರ್ತನನ್ನು) ಸೇವಿಸುವರು.
Cross references
ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ.
ಆ ದಿನದಲ್ಲಿ ಅಶ್ಶೂರಿನಿಂದಲೂ ಕೋಟೆಯುಳ್ಳ ಪಟ್ಟಣಗಳಿಂದಲೂ ಕೋಟೆಯಿಂದ ನದಿಯವರೆಗೂ ಸಮುದ್ರದಿಂದ ಸಮುದ್ರದ ವರೆಗೂ ಬೆಟ್ಟದಿಂದ ಬೆಟ್ಟದ ವರೆಗೂ ನಿನ್ನ ಬಳಿಗೆ ಬರುವರು.
ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.
ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ.