ಆ ದಿನದಲ್ಲಿ ಇಸ್ರಾಯೇಲು ಐಗುಪ್ತ್ಯರ ಸಂಗ ಡಲೂ ಅಶ್ಶೂರ್ಯರ ಸಂಗಡಲೂ ಮೂರನೆಯ ದಾಗಿ ದೇಶದ ಮಧ್ಯದಲ್ಲಿ ಆಶೀರ್ವಾದವಾಗಿರುವದು.ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
Cross references
ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.
ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು.
ಕರ್ತನು ಹೇಳುವದೇನಂದರೆ--ದ್ರಾಕ್ಷೇಗೊನೆ ಯಲ್ಲಿ ಹೊಸದ್ರಾಕ್ಷಾರಸ ಕಂಡುಕೊಳ್ಳುವದನ್ನು ಒಬ್ಬನು ನೋಡಿ--ಕೆಡಿಸಬೇಡ, ಅದರಲ್ಲಿ ಆಶೀರ್ವಾದ ಉಂಟೆಂದು ಹೇಳುವದು ಹೇಗೋ ಹಾಗೆಯೇ ನನ್ನ ಸೇವಕರಿಗೋಸ್ಕರ ಅವರನ್ನೆಲ್ಲಾ ನಾನು ಕೆಡಿಸಿ ಬಿಡದ ಹಾಗೆ ಮಾಡುವೆನು.
ಅವರು ಕಟ್ಟಿದ್ದ ರಲ್ಲಿ ಇನ್ನೊಬ್ಬರು ವಾಸಮಾಡುವದಿಲ್ಲ. ಅವರು ನೆಟ್ಟ ದ್ದನ್ನು ಇನ್ನೊಬ್ಬರು ತಿನ್ನುವದಿಲ್ಲ; ಮರದ ದಿನಗಳ ಹಾಗೆ ನನ್ನ ಜನರ ದಿನಗಳು ಇರುವವು; ನಾನು ಆದುಕೊಂಡವರು ತಮ್ಮ ಕೈಕೆಲಸವನ್ನು ಅನು ಭವಿಸುವರು.
ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನದಿಯಂತೆ ಸಮಾಧಾನವನ್ನೂ ಹರಿಯುವ ಹಳ್ಳ ದಂತೆ ಜನಾಂಗಗಳ ವೈಭವವನ್ನೂ ಅವಳ ಕಡೆಗೆ ಬರಮಾಡುವೆನು; ಆಗ ನೀವು ಅವುಗಳನ್ನು ಹೀರಿ ಕೊಂಡು ಅವಳ ಪಕ್ಕೆಗಳಲ್ಲಿ ಹೊರಲ್ಪಡುವಿರಿ, ಅವಳ ಮೊಣಕಾಲುಗಳ ಮೇಲೆ ಆಡಿಸಲ್ಪಡುವಿರಿ,
ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು;
ಚೀಯೋನ್ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ.
ಆಗುವದೇನಂದರೆ, ಓ ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ, ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ; ಭಯಪಡಬೇಡಿರಿ; ನಿಮ್ಮ ಕೈಗಳು ಬಲವಾಗಿರಲಿ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;
ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.
ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.
ಇದನ್ನು ಮಾಡುವದಕ್ಕೆ ಋಣಸ್ಥರಾಗಿರುವದರಿಂದ ಅವರು ನಿಜವಾಗಿಯೂ ಇಷ್ಟಪಟ್ಟಿದ್ದಾರೆ. ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದವುಗಳಲ್ಲಿ ಪಾಲುಗಾರರಾದ ಮೇಲೆ ಶರೀರಸಂಬಂಧವಾದ ವುಗಳಲ್ಲಿಯೂ ಅವರಿಗೆ ಸೇವೆ ಮಾಡುವದು ಮಾತ್ರ ವಲ್ಲದೆ ಅದು ಅವರ ಕರ್ತವ್ಯವೂ ಆಗಿದೆ.
ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.