ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.
Cross references
ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು.
ಹಾಗೆಯೇ ಅವರಿಬ್ಬರೂ ಫಿಲಿಷ್ಟಿಯರ ಠಾಣದ ವರಿಗೆ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರುಇಗೋ, ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಇಬ್ರಿಯರು ಹೊರಟು ಬರುತ್ತಾರೆಂದರು.
ದೇಶಾಂತದವರು ಬಾಡಿಹೋಗುವರು; ತಮ್ಮನ್ನು ಮುಚ್ಚಿಕೊಂಡ ಸ್ಥಳ ಗಳಿಂದ ನಡುಗುತ್ತಾ ಬರುವರು.
ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.
ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು.
ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
ಸಮುದ್ರವೇ, ನಿನಗೆ ಏನಾಯಿತು? ಯಾಕೆ ಓಡಿ ಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ?
ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ.
ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
ಅವು ಬಂದು ಹಾಳಾದ ಕಣಿವೆಗಳಲ್ಲಿಯೂ ಬಂಡೆಗಳ ಬಿರುಕುಗಳಲ್ಲಿಯೂ ಎಲ್ಲಾ ಮುಳ್ಳಿನ ಮೇಲೆಯೂ ಎಲ್ಲಾ ಪೊದೆಗಳಲ್ಲಿಯೂ ಮುತ್ತಿಕೊಳ್ಳುವವು.
ಕರ್ತನು ಅದರ ಮೇಲೆ ತರುವದಕ್ಕೆ ನೇಮಿ ಸಿದ ದಂಡವು ಹಾದುಹೋಗುವಲ್ಲೆಲ್ಲಾ ಅದು ದಮ್ಮಡಿ ಕಿನ್ನರಿಗಳ ಸಂಗಡ ಇರುವದು; ಆತನು ಗದ್ದಲವುಳ್ಳ ಯುದ್ಧಗಳಲ್ಲಿ ಅದರ ಸಂಗಡ ಯುದ್ಧಮಾಡುವನು.ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
ಆದರೆ ನಾನು ನಿನ್ನನ್ನು ಹಿಂಬಾಲಿಸುವ ಪಾಲಕ ನಾಗಲು ಹಿಂಜರಿಯಲಿಲ್ಲ; ದುರ್ದಿನವನ್ನು ಅಪೇಕ್ಷಿಸ ಲಿಲ್ಲವೆಂದು ನೀನು ಬಲ್ಲೆ; ನನ್ನ ತುಟಿಗಳಿಂದ ಹೊರ ಟದ್ದು ನಿನ್ನ ಸನ್ನಿಧಿಯಲ್ಲಿ ಸರಿಯಾಗಿತ್ತು.
ಇಸ್ರಾಯೇಲಿನ ಪಾಪವಾದ ಅವೇ ನಿನ ಉನ್ನತವಾದ ಸ್ಥಳಗಳು ಹಾಳಾಗಿಹೋಗುವವು. ಮುಳ್ಳುಗಿಡಗಳೂ ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವವು; ಅವರು ಬೆಟ್ಟಗಳಿಗೆ--ನಮ್ಮನ್ನು ಮುಚ್ಚಿರಿ, ಗುಡ್ಡಗಳೇ ನಮ್ಮ ಮೇಲೆ ಬೀಳಿರಿ ಅನ್ನುವರು.
ಇಗೋ, ಕರ್ತನು ತನ್ನ ಸ್ಥಾನದಿಂದ ಹೊರಡುತ್ತಾನೆ; ಆತನು ಇಳಿದು ಭೂಮಿಯ ಉನ್ನತವಾದ ಸ್ಥಳಗಳ ಮೇಲೆ ತುಳಿಯುವನು.
ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.
ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.
ದೇವರು ತೇಮಾನಿ ನಿಂದಲೂ ಪರಿಶುದ್ಧನು ಪಾರಾನ್ ಪರ್ವತದಿಂದಲೂ ಬಂದನು. ಸೆಲಾ. ಆತನ ಮಹಿಮೆ ಆಕಾಶಗಳನ್ನು ಮುಚ್ಚಿತು: ಆತನ ಸ್ತೋತ್ರವು ಭೂಮಿಯನ್ನು ತುಂಬಿ ಸಿತು.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ, ಇನ್ನು ಒಂದು ಸಾರಿ ಕೊಂಚ ಕಾಲವಾದ ಮೇಲೆ ನಾನು ಆಕಾಶಗಳನ್ನೂ ಭೂಮಿಯನ್ನೂ ಸಮುದ್ರ ವನ್ನೂ ಒಣಗಿದ ನೆಲವನ್ನೂ ಕದಲಿಸುತ್ತೇನೆ.
ಹೇಗಂದರೆ, ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನಂದರೆ--ನಾನು ಆಕಾಶಗಳನ್ನೂ ಭೂಮಿಯನ್ನೂ ಕದಲಿಸುವೆನು.
ಆಗ ಅವರು ಬೆಟ್ಟಗಳಿಗೆ--ನಮ್ಮ ಮೇಲೆ ಬೀಳಿರಿ; ಗುಡ್ಡಗಳಿಗೆ-- ನಮ್ಮನ್ನು ಮುಚ್ಚಿಕೊಳ್ಳಿರಿ ಎಂದು ಹೇಳಲಾರಂಭಿಸು ವರು.
ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.
ಇಂಥವರಿಗೆ ಈ ಲೋಕವು ಯೋಗ್ಯವಾದದ್ದಲ್ಲ; ಅವರು ಭೂಮಿಯ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.
ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ.
ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.
ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.
ಆ ದಿನಗಳಲ್ಲಿ ಮನುಷ್ಯರು ಮರಣವನ್ನು ಹುಡುಕಿ ಅದನ್ನು ಕಾಣದೆ ಇರುವರು; ಸಾಯಬೇಕೆಂದು ಕೋರು ವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿ ಹೋಗುವದು
ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.
ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವುಂಟಾಯಿತು; ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ.
ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.