Home Bibles ಯೆಶಾಯ 2:19 · ಕನ್ನಡ ಬೈಬಲ್
ಯೆಶಾಯ 2:19 · ಕನ್ನಡ ಬೈಬಲ್

ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.

Cross references

1 ಸಮುವೇಲ 13:6

ಆಗ ಇಸ್ರಾಯೇಲ್‌ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು.

1 ಸಮುವೇಲ 14:11

ಹಾಗೆಯೇ ಅವರಿಬ್ಬರೂ ಫಿಲಿಷ್ಟಿಯರ ಠಾಣದ ವರಿಗೆ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರುಇಗೋ, ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಇಬ್ರಿಯರು ಹೊರಟು ಬರುತ್ತಾರೆಂದರು.

2 ಸಮುವೇಲ 22:46

ದೇಶಾಂತದವರು ಬಾಡಿಹೋಗುವರು; ತಮ್ಮನ್ನು ಮುಚ್ಚಿಕೊಂಡ ಸ್ಥಳ ಗಳಿಂದ ನಡುಗುತ್ತಾ ಬರುವರು.

ಕೀರ್ತನೆಗಳು 7:6

ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.

ಕೀರ್ತನೆಗಳು 18:6

ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು.

ಕೀರ್ತನೆಗಳು 76:7

ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?

ಕೀರ್ತನೆಗಳು 114:5

ಸಮುದ್ರವೇ, ನಿನಗೆ ಏನಾಯಿತು? ಯಾಕೆ ಓಡಿ ಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ?

ಯೆಶಾಯ 2:10

ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ.

ಯೆಶಾಯ 2:21

ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?

ಯೆಶಾಯ 7:19

ಅವು ಬಂದು ಹಾಳಾದ ಕಣಿವೆಗಳಲ್ಲಿಯೂ ಬಂಡೆಗಳ ಬಿರುಕುಗಳಲ್ಲಿಯೂ ಎಲ್ಲಾ ಮುಳ್ಳಿನ ಮೇಲೆಯೂ ಎಲ್ಲಾ ಪೊದೆಗಳಲ್ಲಿಯೂ ಮುತ್ತಿಕೊಳ್ಳುವವು.

ಯೆಶಾಯ 30:32

ಕರ್ತನು ಅದರ ಮೇಲೆ ತರುವದಕ್ಕೆ ನೇಮಿ ಸಿದ ದಂಡವು ಹಾದುಹೋಗುವಲ್ಲೆಲ್ಲಾ ಅದು ದಮ್ಮಡಿ ಕಿನ್ನರಿಗಳ ಸಂಗಡ ಇರುವದು; ಆತನು ಗದ್ದಲವುಳ್ಳ ಯುದ್ಧಗಳಲ್ಲಿ ಅದರ ಸಂಗಡ ಯುದ್ಧಮಾಡುವನು.ಪೂರ್ವದಿಂದ (ಪುರಾತನದಿಂದ) ತೋಫೆತ್‌ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.

ಯೆರೆಮಿಯ 16:16

ಆದರೆ ನಾನು ನಿನ್ನನ್ನು ಹಿಂಬಾಲಿಸುವ ಪಾಲಕ ನಾಗಲು ಹಿಂಜರಿಯಲಿಲ್ಲ; ದುರ್ದಿನವನ್ನು ಅಪೇಕ್ಷಿಸ ಲಿಲ್ಲವೆಂದು ನೀನು ಬಲ್ಲೆ; ನನ್ನ ತುಟಿಗಳಿಂದ ಹೊರ ಟದ್ದು ನಿನ್ನ ಸನ್ನಿಧಿಯಲ್ಲಿ ಸರಿಯಾಗಿತ್ತು.

ಹೊಶೇಯ 10:8

ಇಸ್ರಾಯೇಲಿನ ಪಾಪವಾದ ಅವೇ ನಿನ ಉನ್ನತವಾದ ಸ್ಥಳಗಳು ಹಾಳಾಗಿಹೋಗುವವು. ಮುಳ್ಳುಗಿಡಗಳೂ ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವವು; ಅವರು ಬೆಟ್ಟಗಳಿಗೆ--ನಮ್ಮನ್ನು ಮುಚ್ಚಿರಿ, ಗುಡ್ಡಗಳೇ ನಮ್ಮ ಮೇಲೆ ಬೀಳಿರಿ ಅನ್ನುವರು.

ಮೀಕ 1:3

ಇಗೋ, ಕರ್ತನು ತನ್ನ ಸ್ಥಾನದಿಂದ ಹೊರಡುತ್ತಾನೆ; ಆತನು ಇಳಿದು ಭೂಮಿಯ ಉನ್ನತವಾದ ಸ್ಥಳಗಳ ಮೇಲೆ ತುಳಿಯುವನು.

ಮೀಕ 7:17

ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.

ನಹೂಮ 1:3

ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.

ಹಬಕ್ಕೂಕ 3:3

ದೇವರು ತೇಮಾನಿ ನಿಂದಲೂ ಪರಿಶುದ್ಧನು ಪಾರಾನ್‌ ಪರ್ವತದಿಂದಲೂ ಬಂದನು. ಸೆಲಾ. ಆತನ ಮಹಿಮೆ ಆಕಾಶಗಳನ್ನು ಮುಚ್ಚಿತು: ಆತನ ಸ್ತೋತ್ರವು ಭೂಮಿಯನ್ನು ತುಂಬಿ ಸಿತು.

ಹಗ್ಗಾಯ 2:6

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ, ಇನ್ನು ಒಂದು ಸಾರಿ ಕೊಂಚ ಕಾಲವಾದ ಮೇಲೆ ನಾನು ಆಕಾಶಗಳನ್ನೂ ಭೂಮಿಯನ್ನೂ ಸಮುದ್ರ ವನ್ನೂ ಒಣಗಿದ ನೆಲವನ್ನೂ ಕದಲಿಸುತ್ತೇನೆ.

ಹಗ್ಗಾಯ 2:21

ಹೇಗಂದರೆ, ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನಂದರೆ--ನಾನು ಆಕಾಶಗಳನ್ನೂ ಭೂಮಿಯನ್ನೂ ಕದಲಿಸುವೆನು.

ಲೂಕ 23:30

ಆಗ ಅವರು ಬೆಟ್ಟಗಳಿಗೆ--ನಮ್ಮ ಮೇಲೆ ಬೀಳಿರಿ; ಗುಡ್ಡಗಳಿಗೆ-- ನಮ್ಮನ್ನು ಮುಚ್ಚಿಕೊಳ್ಳಿರಿ ಎಂದು ಹೇಳಲಾರಂಭಿಸು ವರು.

2 ತೆಸಲೋನಿಕದವರಿಗೆ 1:9

ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.

ಹೆಬ್ರಿಯರಿಗೆ 11:38

ಇಂಥವರಿಗೆ ಈ ಲೋಕವು ಯೋಗ್ಯವಾದದ್ದಲ್ಲ; ಅವರು ಭೂಮಿಯ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.

ಹೆಬ್ರಿಯರಿಗೆ 12:26

ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ.

2 ಪೇತ್ರ 3:10

ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.

ಪ್ರಕಟನೆ 6:12

ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.

ಪ್ರಕಟನೆ 9:6

ಆ ದಿನಗಳಲ್ಲಿ ಮನುಷ್ಯರು ಮರಣವನ್ನು ಹುಡುಕಿ ಅದನ್ನು ಕಾಣದೆ ಇರುವರು; ಸಾಯಬೇಕೆಂದು ಕೋರು ವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿ ಹೋಗುವದು

ಪ್ರಕಟನೆ 11:13

ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.

ಪ್ರಕಟನೆ 11:19

ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.

ಪ್ರಕಟನೆ 16:18

ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವುಂಟಾಯಿತು; ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ.

ಪ್ರಕಟನೆ 20:11

ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.

Interlinear

Choose Theme